ಬ್ರೇಕಿಂಗ್ ನ್ಯೂಸ್
09-08-21 10:57 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 9: ದಕ್ಷಿಣ ಕನ್ನಡ ಜಿಲ್ಲೆಯ ಜನರೇ ಪೊಲೀಸ್ ಇನ್ಸ್ ಪೆಕ್ಟರ್ ಆಗಿ, ಪೊಲೀಸ್ ಸಿಬಂದಿಯಾಗಿ ಇಲಾಖೆ ಸೇರಲು ಬನ್ನಿ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ನೀಡಿದ ಆಫರ್ ಬಗ್ಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಯುವಕರು ಮತ್ತು ಯುವತಿಯರು ಭಾರೀ ಸಂಖ್ಯೆಯಲ್ಲಿ ಸ್ಪಂದಿಸಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರು ತಮ್ಮ ಹೆಸರನ್ನು ನೋಂದಣಿ ಮಾಡಿದ್ದಾರೆ.
ಬೆಳಗ್ಗಿನಿಂದಲೇ ಯುವಕರು ಸರದಿಯಂತೆ ಕಮಿಷರ್ ಕಚೇರಿಗೆ ಬಂದಿದ್ದನ್ನು ನೋಡಿದ ಪೊಲೀಸ್ ಅಧಿಕಾರಿಗಳು ನೋಂದಣಿ ಪ್ರಕ್ರಿಯೆಯನ್ನು ಹಿಂಭಾಗದ ಮೈದಾನಕ್ಕೆ ವರ್ಗಾಯಿಸಿದರು. ಸುಡುತ್ತಿದ್ದ ಬಿಸಿಲಿನ ಮಧ್ಯೆಯೇ ಪೊಲೀಸರಾಗಲು ಬಂದಿದ್ದ ಅಭ್ಯರ್ಥಿಗಳು ತಾಳ್ಮೆಯಿಂದ ಸಾಲುಗಟ್ಟಿ ನಿಂತು ತಮ್ಮ ನೋಂದಣಿ ಮಾಡಿಕೊಂಡರು. ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿರಬೇಕು ಮತ್ತು ಪಿಎಸ್ಐ ಅಥವಾ ಪೊಲೀಸ್ ಪೇದೆಯ ಹುದ್ದೆಗೆ ಅರ್ಜಿ ಸಲ್ಲಿಸಿ, ಪ್ರಾಥಮಿಕ ಅರ್ಹತೆಯನ್ನು ಪಡೆದಿರುವ ಬಗ್ಗೆ ದಾಖಲಾತಿ ಹೊಂದಿರಬೇಕೆಂಬ ನಿಯಮ ವಿಧಿಸಲಾಗಿತ್ತು.
ಆದರೆ, ಹುದ್ದೆ ಗಿಟ್ಟಿಸಲು ಬಂದಿದ್ದವರಲ್ಲಿ ಹೊಸಬರು ಕೂಡ ಇದ್ದರು. ಕೆಲವರು ಸ್ವಂತ ಆಸಕ್ತಿಯಿಂದ ತಾನು ಇನ್ಸ್ ಪೆಕ್ಟರ್ ಆಗಬೇಕೆಂದು ಹೇಳಿಕೊಂಡು ಬಂದವರೂ ಇದ್ದರು. ಕಮಿಷನರ್ ಕಚೇರಿಯಿಂದ ನೀಡಿರುವ ಮಾಹಿತಿ ಪ್ರಕಾರ, ಇಂದು ಒಂದೇ ದಿನ ಒಟ್ಟು 604 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಎಸ್ಐ ಹುದ್ದೆಗೆ 218 ಅಭ್ಯರ್ಥಿಗಳು ಹಾಗೂ ಪಿಸಿ ನೇಮಕಾತಿಗೆ 386 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 566 ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿದ್ದು, 38 ಮಂದಿ ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯಿಂದ ಬಂದಿದ್ದಾರೆ. ಈ ಪೈಕಿ 481 ಮಂದಿ ಯುವಕರು ಮತ್ತು 123 ಯುವತಿಯರು. 372 ಅಭ್ಯರ್ಥಿಗಳು ಪದವೀಧರರಾಗಿದ್ದರೆ, 232 ಪದವಿಯೇತರ ಶಿಕ್ಷಣವನ್ನು ಪಡೆದವರು.
ದಕ್ಷಿಣ ಕನ್ನಡ ಜಿಲ್ಲೆಯ ಮಂದಿ ಪೊಲೀಸ್ ಹುದ್ದೆಗೆ ಬರುವುದು ಅತ್ಯಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ನೂರು ಮಂದಿಗೆ ಒಂದು ತಿಂಗಳ ಕಾರ್ಯಾಗಾರ ನಡೆಸಲು ಮುಂದಾಗಿದ್ದರು. ಆಮೂಲಕ ದ.ಕ. ಜಿಲ್ಲೆಯವರೇ ಪೊಲೀಸ್ ಇಲಾಖೆ ಸೇರುವಂತೆ ಪ್ರೇರಣೆ ನೀಡಿದ್ದರು. ಈ ರೀತಿಯ ವಿಭಿನ್ನ ಆಫರ್ ಕೇಳಿದ ಯುವಕರು ಖುಷ್ ಆಗಿದ್ದು, ಸಂತಸದಲ್ಲೇ ಇಂದು ಕಮಿಷನರ್ ಕಚೇರಿಗೆ ಬಂದಿದ್ದರು. ಆದರೆ, ಭಾರೀ ಸಂಖ್ಯೆಯಲ್ಲಿ ಅರ್ಜಿಗಳು ಬಂದಿರುವ ಕಾರಣ ಇಷ್ಟೊಂದು ಮಂದಿಗೆ ನಿರಾಸೆ ಮಾಡುವುದು ಬೇಡವೆಂದು ಎರಡು ಪಾಳಿಯಲ್ಲಿ ಕಾರ್ಯಾಗಾರ ನಡೆಸಲು ಕಮಿಷನರ್ ಮುಂದಾಗಿದ್ದಾರೆ.
ಮೊದಲಿಗೆ ನೂರು ಮಂದಿಯನ್ನು ಆಯ್ಕೆ ಮಾಡಿ, ಊಟ, ವಸತಿ ಸಹಿತ ಕಾರ್ಯಾಗಾರ ನಡೆಸಲಿದ್ದಾರೆ. ಆಬಳಿಕ ನೂರು ಜನರ ಇನ್ನೊಂದು ತಂಡವನ್ನು ರಚಿಸಿ, ವಸತಿಯೇತರ ಕಾರ್ಯಾಗಾರ ನಡೆಸಲು ಮುಂದಾಗಿದ್ದಾರೆ. ತರಬೇತಿ ಕಾರ್ಯಾಗಾರಕ್ಕೆ ಅಗತ್ಯ ಬಿದ್ದರೆ ಅರ್ಹತಾ ಪರೀಕ್ಷೆ ನಡೆಸುವುದಾಗಿ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಅಲ್ಲದೆ, ಕಾರ್ಯಾಗಾರದ ಬಗ್ಗೆ ಮಾಹಿತಿಯನ್ನು ಮುಂದೆ ತಿಳಿಸಲಾಗುವುದು ಎಂದಿದ್ದಾರೆ.
ಕಳೆದ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ 15 ಮಂದಿ ಪೊಲೀಸ್ ಹುದ್ದೆಗೆ ಆಯ್ಕೆಯಾಗಿದ್ದರು. ಅದರಲ್ಲಿ ನಾಲ್ಕು ಮಂದಿ ಕೊನೆಗೆ ತಾವು ಬರುವುದಿಲ್ಲ ಎಂದು ಹೇಳಿದ್ದರು. ಪೊಲೀಸ್ ಇಲಾಖೆಯಲ್ಲಿ ಈ ಪರಿ ಸೌಲಭ್ಯಗಳನ್ನು ನೀಡುತ್ತಿದ್ದರೂ, ಕರಾವಳಿ ಭಾಗದ ಜನರು ಯಾಕೆ ಇಲಾಖೆ ಸೇರುತ್ತಿಲ್ಲ ಎಂದು ಅಧಿಕಾರಿಗಳು ಪ್ರಶ್ನೆ ಮಾಡಿದ್ದರು. ತಮ್ಮ ಮೂಲ ಚಿತ್ರದುರ್ಗ ಜಿಲ್ಲೆ ಆಗಿದ್ದರೂ, ಕರಾವಳಿ ಜನರು ಮತ್ತು ಈ ಭಾಗದ ಬಗ್ಗೆ ವಿಶೇಷ ಮಮಕಾರ ಇಟ್ಟವರ ರೀತಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಬಾರಿ ದ.ಕ. ಜಿಲ್ಲೆಯ ತುಳುವರಿಗಾಗಿಯೇ ಉಚಿತ ಕಾರ್ಯಾಗಾರ ಏರ್ಪಡಿಸಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.
Commissioner Shashi Kumar call for Police training gets overwhelming Response 600 youths gather to Apply for Police Jobs. More than 600 aspirants gathered at the police ground on Monday August 9 for registration. It is a month-long crash course where interested aspirants will be trained by a team of police sub-inspectors who were recruited recently. The police commissioner in his video had stated that very less number of aspirants from Dakshina Kannada join police force. He took the initiative to conduct the crash course so that more number of aspirants from the district come forward to join the police force. The first preference for candidates for training will be given to Dakshina Kannada, followed by Udupi, Chikkamagaluru and Uttara Kannada.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm