ಬ್ರೇಕಿಂಗ್ ನ್ಯೂಸ್
12-08-21 11:28 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರನೇ ಅಲೆಯ ಮುನ್ಸೂಚನೆಯೋ ಎನ್ನುವಂತೆ, ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಆಗಸ್ಟ್ 1 ರಿಂದ 10ರ ನಡುವೆ 354 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ ಆಗಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ 187 ಹೆಣ್ಮಕ್ಕಳು ಮತ್ತು 167 ಗಂಡು ಮಕ್ಕಳಾಗಿದ್ದು 18 ವರ್ಷದ ಒಳಗಿನ ಮಕ್ಕಳಿಗೆ ಸೋಂಕು ತಗಲಿರುವುದನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರ ಭಾಗದಲ್ಲಿಯೂ ಆಗಸ್ಟ್ ಮೊದಲ ವಾರದಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲಿರುವುದು ಪತ್ತೆಯಾಗಿದೆ. ಆದರೆ, ಸೋಂಕು ಪತ್ತೆಯಾದ ಬಹುತೇಕ ಮಕ್ಕಳಿಗೆ ವಿಪರೀತ ತಲೆನೋವು ಕಂಡುಬಂದಿದ್ದು ಅದು ಬಿಟ್ಟರೆ ಬೇರೇನೂ ರೋಗ ಉಲ್ಬಣಿಸಿದ ಬಗ್ಗೆ ಮಾಹಿತಿ ಇಲ್ಲ. ಹಲವು ಮಕ್ಕಳಲ್ಲಿ ಶೀತ, ಜ್ವರದ ಜೊತೆ ಮೈ ಕೈನೋವಿನ ಲಕ್ಷಣಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ಮನೆಯಲ್ಲೇ ಸೋಂಕು ಪತ್ತೆಯಾಗಿರುವ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಮೊದಲ ಅಲೆಯಲ್ಲಿ ದ.ಕ. ಜಿಲ್ಲೆಯಲ್ಲಿ 2200 ಮಂದಿ ಮಕ್ಕಳಿಗೆ ಸೋಂಕು ಕಂಡುಬಂದಿತ್ತು. 2ನೇ ಅಲೆಯಲ್ಲಿ 7000 ಮಕ್ಕಳಿಗೆ ಕೊರೊನಾ ಸೋಂಕು ಆಗಿತ್ತು ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಆಗಿರುವ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 475 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಆಗಿದೆ.
More than 354 children below the age of 19 years have tested positive for Covid-19 in the past ten days in Mangalore, putting the city on alert. This is one of the highest number of cases among children reported in Karnataka so far.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am