ಬ್ರೇಕಿಂಗ್ ನ್ಯೂಸ್
12-08-21 11:28 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರನೇ ಅಲೆಯ ಮುನ್ಸೂಚನೆಯೋ ಎನ್ನುವಂತೆ, ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಆಗಸ್ಟ್ 1 ರಿಂದ 10ರ ನಡುವೆ 354 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ ಆಗಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ 187 ಹೆಣ್ಮಕ್ಕಳು ಮತ್ತು 167 ಗಂಡು ಮಕ್ಕಳಾಗಿದ್ದು 18 ವರ್ಷದ ಒಳಗಿನ ಮಕ್ಕಳಿಗೆ ಸೋಂಕು ತಗಲಿರುವುದನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರ ಭಾಗದಲ್ಲಿಯೂ ಆಗಸ್ಟ್ ಮೊದಲ ವಾರದಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲಿರುವುದು ಪತ್ತೆಯಾಗಿದೆ. ಆದರೆ, ಸೋಂಕು ಪತ್ತೆಯಾದ ಬಹುತೇಕ ಮಕ್ಕಳಿಗೆ ವಿಪರೀತ ತಲೆನೋವು ಕಂಡುಬಂದಿದ್ದು ಅದು ಬಿಟ್ಟರೆ ಬೇರೇನೂ ರೋಗ ಉಲ್ಬಣಿಸಿದ ಬಗ್ಗೆ ಮಾಹಿತಿ ಇಲ್ಲ. ಹಲವು ಮಕ್ಕಳಲ್ಲಿ ಶೀತ, ಜ್ವರದ ಜೊತೆ ಮೈ ಕೈನೋವಿನ ಲಕ್ಷಣಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ಮನೆಯಲ್ಲೇ ಸೋಂಕು ಪತ್ತೆಯಾಗಿರುವ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಮೊದಲ ಅಲೆಯಲ್ಲಿ ದ.ಕ. ಜಿಲ್ಲೆಯಲ್ಲಿ 2200 ಮಂದಿ ಮಕ್ಕಳಿಗೆ ಸೋಂಕು ಕಂಡುಬಂದಿತ್ತು. 2ನೇ ಅಲೆಯಲ್ಲಿ 7000 ಮಕ್ಕಳಿಗೆ ಕೊರೊನಾ ಸೋಂಕು ಆಗಿತ್ತು ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಆಗಿರುವ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 475 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಆಗಿದೆ.
More than 354 children below the age of 19 years have tested positive for Covid-19 in the past ten days in Mangalore, putting the city on alert. This is one of the highest number of cases among children reported in Karnataka so far.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm