ಬ್ರೇಕಿಂಗ್ ನ್ಯೂಸ್
13-08-21 12:40 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ಕರಾವಳಿಯಲ್ಲಿ ಭಯೋತ್ಪಾದಕರ ಹೆಜ್ಜೆ ಗುರುತು ದೃಢಪಟ್ಟಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕೆಂಬ ಆಗ್ರಹ ಕೇಳಿಬಂದಿತ್ತು. ಇದೀಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಲ್ಲಿ ಕೇಳಿದ ಪ್ರಶ್ನೆಗೆ, ಈಗಾಗ್ಲೇ ಇದರ ಬಗ್ಗೆ ಗೃಹ ಇಲಾಖೆಯಿಂದ ಸಭೆಗಳನ್ನು ನಡೆಸಲಾಗುತ್ತಿದೆ. ಇದಕ್ಕಾಗಿ ರಾಜ್ಯದಲ್ಲಿ ದಕ್ಷ ಗೃಹ ಸಚಿವರಿದ್ದಾರೆ. ಈ ಬಗ್ಗೆ ಎರಡು ಬಾರಿ ಮೀಟಿಂಗ್ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ಮುಂದೆಯೂ ಪರಿಶೀಲನೆ, ಸಭೆಗಳು ನಡೆಯಲಿದೆ. ಭದ್ರತಾ ವಿಚಾರಗಳ ಬಗ್ಗೆ ನಾವೇನೂ ಹೆಚ್ಚು ಮಾತನಾಡಲು ಆಗಲ್ಲ. ಈ ಬಗ್ಗೆ ನಾವೆಲ್ಲ ಒಟ್ಟಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕದ್ರಿ ಸರ್ಕಿಟ್ ಹೌಸ್ ಗೆ ಬಂದಿದ್ದ ವೇಳೆ ಕೇಳಿದ ಪ್ರಶ್ನೆಗೆ ಬೊಮ್ಮಾಯಿ ಚುಟುಕಾಗಿ ಉತ್ತರಿಸಿ ನಿರ್ಗಮಿಸಿದ್ದಾರೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ಉಳ್ಳಾಲಕ್ಕೆ ದಾಳಿ ನಡೆಸಿ, ಮಾಜಿ ಶಾಸಕರೊಬ್ಬರ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಒಬ್ಬ ಯುವಕನನ್ನು ಬಂಧಿಸಿ ಕರೆದೊಯ್ದಿದ್ದರು. ಆನಂತರ ಭಟ್ಕಳದಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು, ಐಸಿಸ್ ಪರವಾಗಿ ಆನ್ಲೈನ್ ಮ್ಯಾಗಜಿನ್ ನಡೆಸುತ್ತಿದ್ದ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಬಜರಂಗದಳ ಕಾರ್ಯಕರ್ತರು ಉಳ್ಳಾಲದಲ್ಲಿ ಪ್ರತಿಭಟನೆ ನಡೆಸಿದ್ದು, ದಾಳಿಗೆ ಒಳಗಾಗಿದ್ದ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
Terror Links with ISIS CM Bommai hints of NIA office soon in Mangalore. Recently The Vishwa Hindu Parishad (VHP) on Wednesday reiterated its demand that a permanent National Investigation Agency (NIA) office and an Army camp be set up in Karnataka’s Mangaluru. The NIA had arrested Ammar Abdul Rahman of Ullal earlier this month in connection with the ISIS module case of Kerala. Referring to the case, VHP Mangaluru division secretary Sharan Pumpwell had on Monday claimed that it proved the anti-nationals were making the coastal region their base.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am