ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.
ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm