ಬ್ರೇಕಿಂಗ್ ನ್ಯೂಸ್
13-08-21 08:59 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: "ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ" ಎನ್ನುವ ವಚನ ಒಂದಿದೆ. ಹೌದು.. ನೈಜ ನಾಗರ ಕಂಡರೆ ದೂರಕ್ಕೆ ಓಡುವವರೇ ಜಾಸ್ತಿ. ಹೀಗಾಗಿ ಕಲ್ಲಿನ ನಾಗನಿಗೆ ಮಾತ್ರ ಹಾಲೆರೆಯುವ ಪದ್ಧತಿ ಬಂದಿದೆ. ಹಾಗಂತಲೇ, ಹೆಡೆಯೆತ್ತುವ ಹಾವು ಕಂಡರೆ ಕೊಲ್ಲುವರು ಎಂದು ವಚನಕಾರರು ಹೇಳಿದ್ದರು. ಆದರೆ, ಈಗಿನ ಆಧುನಿಕ ಕಾಲದಲ್ಲಿ ಈ ವಚನ ಅಷ್ಟು ಒಗ್ಗಿಕೊಳ್ಳುವುದಿಲ್ಲವೋ ಏನೋ.. ಯಾಕಂದ್ರೆ ಇಲ್ಲೊಬ್ಬರು ನೈಜ ನಾಗನಿಗೇ ಹಾಲು, ಸೀಯಾಳ ಅಭಿಷೇಕ ಮಾಡಿ ಗಮನ ಸೆಳೆದಿದ್ದಾರೆ.
ನಾಗರ ಪಂಚಮಿಯ ದಿನ ನಾಗನ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಹಿಂದಿನಿಂದಲೂ ಬಂದ ಪದ್ಧತಿ. ಕರಾವಳಿಯಲ್ಲಂತೂ ನಾಗಬನ, ನಾಗನ ಕ್ಷೇತ್ರಗಳಿಗೆ ತೆರಳಿ, ಈ ದಿನ ಕಡ್ಡಾಯವಾಗಿ ಪೂಜೆ ಸಲ್ಲಿಸುತ್ತಾರೆ. ಈ ನಡುವೆ ಉಡುಪಿಯಲ್ಲಿ ಒಂದು ವಿಚಿತ್ರ ವಿದ್ಯಮಾನ ಸಂಭವಿಸಿದೆ. ಕೇವಲ ಕಲ್ಲನಾಗರನಿಗೆ ಮಾತ್ರವಲ್ಲದೆ ನಿಜವಾದ ನಾಗನಿಗೂ ಪೂಜೆ ಸಲ್ಲಿಕೆಯಾಗಿದೆ.



ಕಾಪು ತಾಲೂಕಿನ ಮಂಜೂರು ಎಂಬಲ್ಲಿ ವಿಶೇಷ ಪೂಜೆ ನಡೆದಿದೆ. ಇಲ್ಲಿನ ಪುರೋಹಿತ ವೃತ್ತಿ ನಡೆಸುವ ಗೋವರ್ಧನ ಭಟ್ ಗೋವಿನ ರೀತಿಯಲ್ಲೆ ನಾಗನ ಪ್ರೀತಿಯಿಂದ ನೋಡಿಕೊಂಡು ಬಂದವರು. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡುವ ವಿಶೇಷ ಹವ್ಯಾಸ ಹೊಂದಿದ್ದಾರೆ. ಈ ಪರಿಸರದಲ್ಲಿ ಎಲ್ಲೇ ಗಾಯಾಳು ನಾಗರ ಹಾವು ಕಂಡುಬಂದರೆ, ಗೋವರ್ಧನ ಭಟ್ಟರಿಗೆ ತಿಳಿಸುತ್ತಾರೆ. ಹಾಗಾಗಿ ಇವರ ಮನೆಯಲ್ಲಿ ಯಾವತ್ತೂ ಗುಣಮುಖವಾದ ಹಾವುಗಳು ಇದ್ದೇ ಇರುತ್ತವೆ.
ಈ ಬಾರಿ ನಾಗರಪಂಚಮಿಯ ದಿನ, ತಾವು ಮನೆಯಲ್ಲೇ ಆರೈಕೆ ಮಾಡಿದ ನಾಗರ ಹಾವುಗಳಿಗೆ ಆರತಿ ಬೆಳಗಿ, ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೀಗೆ ನೈಜ ನಾಗರನಿಗೆ ಪೂಜೆ ಮಾಡುವ ವಿಡಿಯೋ ವೈರಲ್ ಆಗಿದ್ದು ಜನರು ಅಚ್ಚರಿಗೆ ಒಳಗಾಗಿದ್ದಾರೆ. ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನವನ್ನು ಇನ್ನು ಬದಲಿಸಬೇಕು. ಹಾವು ಕಂಡರೆ ಓಡಬೇಕಿಲ್ಲ. ಅವುಗಳಿಗೂ ನೋವು ನಲಿವು ಇದೆ ಎಂಬುದನ್ನು ಕಂಡುಕೊಳ್ಳಬೇಕಿದೆ.
Real Nagara Snake worshipped at Home by Priests in Udupi for Nagara Panchami 2021.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am