ಬ್ರೇಕಿಂಗ್ ನ್ಯೂಸ್
13-08-21 09:45 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ನಗರದ ಕೆಪಿಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿದ್ದು, ಕೋವಿಡ್ ಸೋಂಕಿತ ಮತ್ತು ಇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗ ಮಾಡದೆ ಅಲ್ಲಿನ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಪಿಟಿ ಕಾಲೇಜಿನಲ್ಲಿ ಶುಕ್ರವಾರ ಸೆಮಿಸ್ಟರ್ ಪರೀಕ್ಷೆ ಆರಂಭಗೊಂಡಿತ್ತು. ಕೋವಿಡ್ ಸೋಂಕಿತರು ಕೂಡ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು, ಅವರಿಗೆ ಪ್ರತ್ಯೇಕ ವಿಭಾಗ ಮಾಡುವ ನಿಟ್ಟಿನಲ್ಲಿ ಆಯಾ ಕಾಲೇಜು ಆಡಳಿತಕ್ಕೆ ಜಿಲ್ಲಾಡಳಿತದಿಂದ ನಿರ್ದೇಶನ ನೀಡಲಾಗಿತ್ತು. ಆದರೆ, ಕೆಪಿಟಿ ಕಾಲೇಜಿನಲ್ಲಿ ಈ ವಿಚಾರದಲ್ಲಿ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಒಬ್ಬ ವಿದ್ಯಾರ್ಥಿ ಕೋವಿಡ್ ಸೋಂಕು ಆಗಿರುವ ಬಗ್ಗೆ ಆಯಾ ವಿಭಾಗದ ಪ್ರಮುಖರಿಗೆ ಮಾಹಿತಿ ನೀಡಿದ್ದ. ಆಗಸ್ಟ್ 7ರಂದು ತಾನು ಪಾಸಿಟಿವ್ ಆಗಿರುವ ಬಗ್ಗೆ ಸಂದೇಶವನ್ನು ಕಾಲೇಜು ಪ್ರಮುಖರಿಗೆ ನೀಡಿದ್ದ. ಕಾಲೇಜಿನಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ ಎನ್ನುವ ಸೂಚನೆ ನೀಡಿದ್ದರಿಂದ ಪರೀಕ್ಷೆಗೂ ಹಾಜರಾಗಿದ್ದ.
ಆದರೆ, ಪಾಸಿಟಿವ್ ಆಗಿದ್ದ ವಿದ್ಯಾರ್ಥಿಯನ್ನು ಪ್ರತ್ಯೇಕ ಹಾಲ್ ನಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿರಲಿಲ್ಲ. ಸಿಬಂದಿ ಮತ್ತು ಉಪನ್ಯಾಸಕರಿಗೆ ಈ ಬಗ್ಗೆ ಮಾಹಿತಿ ಇದ್ದರೂ, ಮಾರ್ಗಸೂಚಿಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರೇ ಎನ್ನುವ ಅನುಮಾನ ಎದ್ದಿದೆ. ಕೆಲವು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದರೂ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಕೆಲವರಿಗೆ ಮಾತ್ರ ಪ್ರತ್ಯೇಕ ಕೊಠಡಿ ಇದ್ದರೆ ಒಂದಷ್ಟು ಮಂದಿಯನ್ನು ಅಸ್ಪೃಶ್ಯರ ರೀತಿ ಇತರ ವಿದ್ಯಾರ್ಥಿಗಳ ನಡುವೆ ಹಾಲ್ ನಲ್ಲೇ ಒಂದು ಮೂಲೆಯಲ್ಲಿ ಕುಳ್ಳಿರಿಸಿದ ಪ್ರಸಂಗ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೋವಿಡ್ ಸೋಂಕು ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಸರಕಾರ ಏನೆಲ್ಲ ಕಸರತ್ತು ನಡೆಸುತ್ತಿದ್ದರೂ, ಅದರ ನಡುವೆಯೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆತಂಕಗಳಿದ್ದರೂ, ಪರೀಕ್ಷೆಗೆ ಕೋವಿಡ್ ಸೋಂಕಿತರಿಗೂ ಅವಕಾಶ ನೀಡಲಾಗಿತ್ತು. ಆದರೆ, ಕೆಲವು ಕಾಲೇಜು ಪ್ರಮುಖರು ಈ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸದೆ ಅಲ್ಲಿನ ಸಿಬಂದಿ ಮತ್ತು ಇತರ ವಿದ್ಯಾರ್ಥಿಗಳಿಗೂ ಸೋಂಕು ಹರಡಲು ಕಾರಣವಾಗುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
KPT college in Mangalore is alleged of conducting Semister exams with students tested covid posting in the same examination hall. Students slam administration for negligence.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm