ಬ್ರೇಕಿಂಗ್ ನ್ಯೂಸ್
15-08-21 01:22 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದಲಿತ ಉಸ್ತುವಾರಿ ಸಚಿವರೊಬ್ಬರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 75ನೇ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನಡೆಸಿದ್ದು ಜಿಲ್ಲೆಯ ಮಟ್ಟಿಗೆ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ, ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ಶಾಸಕರು ಈ ಬಾರಿ ಉಸ್ತುವಾರಿ ಸಚಿವರಾಗಿದ್ದಾರೆ. ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿರುವ ಎಸ್. ಅಂಗಾರ ಈ ಬಾರಿ ಸಚಿವರಾಗಿದ್ದು, ಇತ್ತೀಚೆಗೆ ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಯಾಗಿ ಮಾಡಲಾಗಿದೆ.











ಇತರ ಜಿಲ್ಲೆಗಳಿಗೆ ಹೋಲಿಸಿದರೆ, ದಕ್ಷಿಣ ಕನ್ನಡ ವಿವಿಧ ಕ್ಷೇತ್ರಗಳಲ್ಲಿ ತುಂಬ ಮುಂದುವರಿದ ಜಿಲ್ಲೆ. ಅಷ್ಟೇ ಅಲ್ಲದೆ, ಬಂಟ, ಬಿಲ್ಲವ ಮತ್ತು ಮುಸ್ಲಿಂ ಮತದಾರರೇ ಅತ್ಯಧಿಕ ಇರುವ ಜಿಲ್ಲೆ. ಇಂಥ ಜಿಲ್ಲೆಯಲ್ಲಿ ಒಬ್ಬರು ದಲಿತ ವ್ಯಕ್ತಿ ಶಾಸಕರಾಗಿ ಬಿಜೆಪಿಯಿಂದ ಸತತವಾಗಿ 30 ವರ್ಷಗಳಿಂದ ಗೆಲ್ಲುತ್ತಾ ಬಂದಿದ್ದರೂ, ರಾಜ್ಯದಲ್ಲಿ ಬಿಜೆಪಿ ಎರಡು, ಮೂರು ಬಾರಿ ಅಧಿಕಾರಕ್ಕೆ ಬಂದರೂ ಸಚಿವರನ್ನಾಗಿ ಮಾಡಿರಲಿಲ್ಲ. ಈ ಬಾರಿ ಅಚಾನಕ್ಕಾಗಿ ಸಚಿವರಾಗಿದ್ದಲ್ಲದೆ, ಪ್ರತಿಷ್ಠೆಯ ಕಾರ್ಯಕ್ರಮ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸುವ ಅದೃಷ್ಟ ಲಭಿಸಿದೆ. ಸಮಾಜದ ಅತ್ಯಂತ ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರು ಧ್ವಜಾರೋಹಣ ಮಾಡಿದ್ದು ಜಿಲ್ಲೆಯ ಮಟ್ಟಿಗೆ ಹೊಸ ಮೈಲಿಗಲ್ಲು. ಅಲ್ಲದೆ, ಹಿಂದುಳಿದ ವರ್ಗದ ಜನಾಂಗಕ್ಕೆ ಶ್ರೇಯವೂ ಹೌದು.
ಬಂಗ್ಲೆಗುಡ್ಡೆಯಲ್ಲಿ ಬಲಿದಾನಿಗಳಿಗೆ ಸ್ಮಾರಕ
ಧ್ವಜಾರೋಹಣ ನೆರವೇರಿಸಿ ಪೊಲೀಸ್ ಗೌರವ ಸ್ವೀಕರಿಸಿದ ಬಳಿಕ ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವ ಅಂಗಾರ, ತಮ್ಮ ಭಾಷಣದಲ್ಲಿ ದೇಶದಲ್ಲೇ ಮೊದಲು ಸ್ವಾತಂತ್ರ್ಯಕ್ಕಾಗಿ ಕಹಳೆ ಊದಿದ ಸುಳ್ಯದ ಇತಿಹಾಸವನ್ನು ಮೆಲುಕು ಹಾಕಿದರು. 1835-37ರಲ್ಲಿ ಸುಳ್ಯದಿಂದ ಮೊದಲ್ಗೊಂಡ ಸ್ವಾತಂತ್ರ್ಯದ ಕಹಳೆ ಕೊಡಗಿನಿಂದ ಮಂಗಳೂರಿನ ವರೆಗೆ ಬ್ರಿಟಿಷರನ್ನು ಅಧೀರರನ್ನಾಗಿಸಿತ್ತು. ಜಿಲ್ಲೆಯ ಜನರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ನಾವು ಮರೆಯಬಾರದು. ಸ್ವಾತಂತ್ರ್ಯಕ್ಕಾಗಿ ಬಂಡೆದ್ದ ಜನರು ಬೆಳ್ಳಾರೆಯಲ್ಲಿದ್ದ ಬ್ರಿಟಿಷರ ಕೋಟೆಯನ್ನು ಸೂರೆ ಮಾಡಿದ್ದರು. ಅಲ್ಲಿನ ಬಂಗ್ಲೆಗುಡ್ಡೆಯ ಕೋಟೆಯಲ್ಲಿ ಅಮರ ಸುಳ್ಯಕ್ಕಾಗಿ ಮಡಿದವರ ನೆನಪಿನಲ್ಲಿ ಸ್ಮಾರಕ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ.
The Dakshina Kannada district administration marked India's 75th Independence Day with a celebration at Nehru Maidan here. Minister for fisheries, ports and inland transport S Angara, who is also the district in-charge minister, hoisted the Tricolour and inspected the guard of honour. Addressing the gathering, Angara said, "At the outset, I offer my sincere tribute to all the leaders of our country who sacrificed their life in the freedom struggle.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am