ಬ್ರೇಕಿಂಗ್ ನ್ಯೂಸ್
15-08-21 01:22 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದಲಿತ ಉಸ್ತುವಾರಿ ಸಚಿವರೊಬ್ಬರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 75ನೇ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನಡೆಸಿದ್ದು ಜಿಲ್ಲೆಯ ಮಟ್ಟಿಗೆ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ, ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ಶಾಸಕರು ಈ ಬಾರಿ ಉಸ್ತುವಾರಿ ಸಚಿವರಾಗಿದ್ದಾರೆ. ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿರುವ ಎಸ್. ಅಂಗಾರ ಈ ಬಾರಿ ಸಚಿವರಾಗಿದ್ದು, ಇತ್ತೀಚೆಗೆ ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಯಾಗಿ ಮಾಡಲಾಗಿದೆ.
ಇತರ ಜಿಲ್ಲೆಗಳಿಗೆ ಹೋಲಿಸಿದರೆ, ದಕ್ಷಿಣ ಕನ್ನಡ ವಿವಿಧ ಕ್ಷೇತ್ರಗಳಲ್ಲಿ ತುಂಬ ಮುಂದುವರಿದ ಜಿಲ್ಲೆ. ಅಷ್ಟೇ ಅಲ್ಲದೆ, ಬಂಟ, ಬಿಲ್ಲವ ಮತ್ತು ಮುಸ್ಲಿಂ ಮತದಾರರೇ ಅತ್ಯಧಿಕ ಇರುವ ಜಿಲ್ಲೆ. ಇಂಥ ಜಿಲ್ಲೆಯಲ್ಲಿ ಒಬ್ಬರು ದಲಿತ ವ್ಯಕ್ತಿ ಶಾಸಕರಾಗಿ ಬಿಜೆಪಿಯಿಂದ ಸತತವಾಗಿ 30 ವರ್ಷಗಳಿಂದ ಗೆಲ್ಲುತ್ತಾ ಬಂದಿದ್ದರೂ, ರಾಜ್ಯದಲ್ಲಿ ಬಿಜೆಪಿ ಎರಡು, ಮೂರು ಬಾರಿ ಅಧಿಕಾರಕ್ಕೆ ಬಂದರೂ ಸಚಿವರನ್ನಾಗಿ ಮಾಡಿರಲಿಲ್ಲ. ಈ ಬಾರಿ ಅಚಾನಕ್ಕಾಗಿ ಸಚಿವರಾಗಿದ್ದಲ್ಲದೆ, ಪ್ರತಿಷ್ಠೆಯ ಕಾರ್ಯಕ್ರಮ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸುವ ಅದೃಷ್ಟ ಲಭಿಸಿದೆ. ಸಮಾಜದ ಅತ್ಯಂತ ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರು ಧ್ವಜಾರೋಹಣ ಮಾಡಿದ್ದು ಜಿಲ್ಲೆಯ ಮಟ್ಟಿಗೆ ಹೊಸ ಮೈಲಿಗಲ್ಲು. ಅಲ್ಲದೆ, ಹಿಂದುಳಿದ ವರ್ಗದ ಜನಾಂಗಕ್ಕೆ ಶ್ರೇಯವೂ ಹೌದು.
ಬಂಗ್ಲೆಗುಡ್ಡೆಯಲ್ಲಿ ಬಲಿದಾನಿಗಳಿಗೆ ಸ್ಮಾರಕ
ಧ್ವಜಾರೋಹಣ ನೆರವೇರಿಸಿ ಪೊಲೀಸ್ ಗೌರವ ಸ್ವೀಕರಿಸಿದ ಬಳಿಕ ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವ ಅಂಗಾರ, ತಮ್ಮ ಭಾಷಣದಲ್ಲಿ ದೇಶದಲ್ಲೇ ಮೊದಲು ಸ್ವಾತಂತ್ರ್ಯಕ್ಕಾಗಿ ಕಹಳೆ ಊದಿದ ಸುಳ್ಯದ ಇತಿಹಾಸವನ್ನು ಮೆಲುಕು ಹಾಕಿದರು. 1835-37ರಲ್ಲಿ ಸುಳ್ಯದಿಂದ ಮೊದಲ್ಗೊಂಡ ಸ್ವಾತಂತ್ರ್ಯದ ಕಹಳೆ ಕೊಡಗಿನಿಂದ ಮಂಗಳೂರಿನ ವರೆಗೆ ಬ್ರಿಟಿಷರನ್ನು ಅಧೀರರನ್ನಾಗಿಸಿತ್ತು. ಜಿಲ್ಲೆಯ ಜನರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ನಾವು ಮರೆಯಬಾರದು. ಸ್ವಾತಂತ್ರ್ಯಕ್ಕಾಗಿ ಬಂಡೆದ್ದ ಜನರು ಬೆಳ್ಳಾರೆಯಲ್ಲಿದ್ದ ಬ್ರಿಟಿಷರ ಕೋಟೆಯನ್ನು ಸೂರೆ ಮಾಡಿದ್ದರು. ಅಲ್ಲಿನ ಬಂಗ್ಲೆಗುಡ್ಡೆಯ ಕೋಟೆಯಲ್ಲಿ ಅಮರ ಸುಳ್ಯಕ್ಕಾಗಿ ಮಡಿದವರ ನೆನಪಿನಲ್ಲಿ ಸ್ಮಾರಕ ನಿರ್ಮಿಸುವುದಾಗಿ ಘೋಷಣೆ ಮಾಡಿದ್ದಾರೆ.
The Dakshina Kannada district administration marked India's 75th Independence Day with a celebration at Nehru Maidan here. Minister for fisheries, ports and inland transport S Angara, who is also the district in-charge minister, hoisted the Tricolour and inspected the guard of honour. Addressing the gathering, Angara said, "At the outset, I offer my sincere tribute to all the leaders of our country who sacrificed their life in the freedom struggle.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm