ಬ್ರೇಕಿಂಗ್ ನ್ಯೂಸ್
15-08-21 09:47 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ವೀರ ಸಾರ್ವಕರ್ ಫೋಟೋ ತೆಗೆಯಲು ಹೇಳುವ ನೆಪದಲ್ಲಿ ರಥದ ಸಂಚಾರಕ್ಕೆ ಅಡ್ಡಿಪಡಿಸಿ ದಾಂಧಲೆ ಮಾಡಿದ್ದಾರೆ. ಇಡೀ ದೇಶ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದರೆ ಕೆಲವರು ದಾಂಧಲೆ ನಡೆಸಿದ್ದಾರೆ. ಈ ವಿಚಾರವನ್ನು ಗೃಹ ಮಂತ್ರಿಗಳ ಗಮನಕ್ಕೆ ತರಲಾಗಿದೆ. ಸ್ವಾತಂತ್ರೋತ್ಸವ ರಥಕ್ಕೆ ಅಡ್ಡಹಾಕುವ ತಾಲಿಬಾನಿ ಸಂಸ್ಕೃತಿಯನ್ನ ದ.ಕ ಜಿಲ್ಲೆಯಲ್ಲಿ ನಡೆಯಲು ಬಿಡಲ್ಲ. ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲು ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದೇ ವೇಳೆ, ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐನಿಂದ ಅಡ್ಡಿಪಡಿಸಿದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ಕೊಟ್ಟಿದ್ದಾರೆ. ಕಬಕ ಭಾಗದ ಮತೀಯವಾದಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದಾಗಿದೆ. ಸಮರ್ಪಕ ತನಿಖೆ ನಡೆಸಲು ಪ್ರಕರಣವನ್ನು ಎನ್ಐಎಗೆ ಕೊಡಬೇಕು. ಕಬಕ ಕಾಶ್ಮೀರ ಆಗೋದನ್ನ ಸಹಿಸುವುದಿಲ್ಲ ಎಂದು ಸಂಜೀವ ಮಠಂದೂರು ಹೇಳಿಕೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಳಿಕ ಪುತ್ತೂರು ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹ ವ್ಯಕ್ತಪಡಿಸಿದ್ದಾರೆ. ತಕ್ಷಣ ಕೇಸು ದಾಖಲಿಸಿ ಬಂಧಿಸದೇ ಇದ್ರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು. ಆದರೆ ಕಬಕ ಭಾಗದ ಮತೀಯವಾದಿ ಕಿಡಿಗೇಡಿಗಳು ರಥಕ್ಕೆ ತಡೆ ಒಡ್ಡಿದ್ದಾರೆ. ಈ ಮತೀಯವಾದಿ ದೇಶದ್ರೋಹಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.
SDPI activists disrupt Independence Day celebrations in Puttur Kadaba kota writes to Home Minister to take action.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am