ಬ್ರೇಕಿಂಗ್ ನ್ಯೂಸ್
15-08-21 11:10 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತೊಂದು ತುಳು ಹಾಡು ಹಾಡಿದ್ದಾರೆ. ಕೋಟಿ ಚೆನ್ನಯ ತುಳು ಚಿತ್ರದ ‘’ಕೆಮ್ಮಲೆತಾ ಬ್ರಹ್ಮಾ ಎಂಕ್ಲೆ ಕುಲದೈವೋ ಬ್ರಹ್ಮಾ’’ ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಾಮಾನ್ಯವಾಗಿ ಈ ಹಾಡನ್ನು ತುಳು ಭಾಷೆಯ ಬಗ್ಗೆ ತಿಳಿಯದವರು ಹಾಡುವುದು ಕಷ್ಟ. ಒರಿಜಿನಲ್ ಪದ್ಯವನ್ನು ಪಿ.ಬಿ.ಶ್ರೀನಿವಾಸ್ ತಮ್ಮ ಮಧುರ ಕಂಠದಲ್ಲಿ ಹಾಡುವ ಮೂಲಕ ಆ ಹಾಡನ್ನು ಅಜರಾಮರವಾಗಿಸಿದ್ದರು. ಅವರು ಕೂಡ ತುಳುವರಲ್ಲ. ಆದರೆ, ತಮ್ಮ ಗಾಯನದ ಮೂಲಕವೇ ಹಾಡಿಗೆ ಸತ್ವ ತಂದುಕೊಟ್ಟಿದ್ದರು. ಉಚ್ಚಾರ, ಅರ್ಥಗಳ ಬಗ್ಗೆ ತಿಳಿದುಕೊಂಡು ಸಾಕಷ್ಟು ಅಭ್ಯಾಸ ನಡೆಸಿ ಹಾಡಿಗೆ ಸ್ವರ ತುಂಬಿದ್ದರು.
ಹಾಗೆಯೇ, ಮಂಗಳೂರು ಕಮಿಷನರ್ ಆಗಿರುವ ಶಶಿಕುಮಾರ್ ಸ್ವತಃ ಹಾಡುಗಾರರೇನಲ್ಲ. ತುಳು ಭಾಷೆಯ ಗಂಧ ಗಾಳಿಯೂ ತಿಳಿದವರಲ್ಲ. ಆದರೆ, ಹಾಡು, ಗಾಯನದ ಬಗ್ಗೆ ಅಪಾರ ಒಲವುಳ್ಳವರು. ಮಂಗಳೂರಿಗೆ ಬರುವುದಕ್ಕಿಂತಲೂ ಹಿಂದೆ ತಾವು ಕರ್ತವ್ಯದಲ್ಲಿದ್ದ ಜಾಗದಲ್ಲೆಲ್ಲ ಹಾಡುಗಳನ್ನು ಹಾಡಿ ರಂಜಿಸಿದ್ದರು. ಮಂಗಳೂರಿಗೆ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕವೂ ಶಶಿಕುಮಾರ್ ತಮ್ಮ ಗಾಯನ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಅದರ ಜೊತೆಗೆ, ಕರಾವಳಿಯ ನೆಲದ ಭಾಷೆ ತುಳುವನ್ನು ಕಲಿಯಲು, ಇಲಾಖೆಯ ಸಹೋದ್ಯೋಗಿಗಳಿಗೆ ತುಳುವನ್ನು ತಜ್ಞರಿಂದ ಕಲಿಸುವುದಕ್ಕೂ ಮುಂದಾಗಿದ್ದಾರೆ.
ಇದೀಗ ತುಳು ಚಿತ್ರದ ಕಠಿಣ ಹಾಡೊಂದನ್ನು ಹಾಡುವ ಮೂಲಕ ತುಳುವರ ಮನ ಗೆದ್ದಿದ್ದಾರೆ. ಎರಡು ತಿಂಗಳ ಹಿಂದೆ ಮೋಕೆದ ಸಿಂಗಾರಿ ಎನ್ನುವ ತುಳು ಹಾಡನ್ನು ಹಾಡಿದ್ದ ಕಮಿಷನರ್, ಆಬಳಿಕ ಯಾರೋ ಸಲಹೆ ಕೊಟ್ಟರೆಂದು ಕೋಟಿ ಚೆನ್ನಯ ಚಿತ್ರದ ಹಾಡನ್ನು ಹಾಡಲು ಕಲಿಯತೊಡಗಿದ್ದರು. ಕೊನೆಗೂ ಅದರಲ್ಲಿ ಯಶಸ್ಸು ಕಂಡಿದ್ದಾರೆ.
Independence Day Special 2021 Mangalore Police Commissioner Shashi Kumar Sings Koti Chennaya tulu song.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm