ಬ್ರೇಕಿಂಗ್ ನ್ಯೂಸ್
16-08-21 05:22 pm Mangaluru Correspondent ಕರಾವಳಿ
ಉಳ್ಳಾಲ, ಆ.16: ಹರೇಕಳ ಡ್ಯಾಂ ನಿರ್ಮಾಣದ ಯೋಜನೆ ಪ್ರಸ್ತಾಪ ಬಂದಾಗ ಅನೇಕರು ಇದು ಸಾಧ್ಯನಾ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಅಣೆಕಟ್ಟು ಪೂರ್ಣಗೊಳ್ಳುತ್ತಿದ್ದು ಅಸಾಧ್ಯವಾದುದನ್ನ ಸಾಧ್ಯವನ್ನಾಗಿಸುವುದೇ ನನ್ನ ಕಾರ್ಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.
ಹರೇಕಳ ಉಲ್ಲಾಸ್ ನಗರ (ಬಾವಲಿ ಗುರಿ)ದಲ್ಲಿ ಸುಮಾರು 1 ಕೋಟಿ 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗ್ರಾಮ ಸೌಧ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಪಂಚಾಯತ್ ಆಡಳಿತ ಅಚ್ಚುಕಟ್ಟಾಗಿದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಹರೇಕಳವನ್ನ ಮಾದರಿ ಗ್ರಾಮ ಪಂಚಾಯತ್ ಆಗಿ ನಿರ್ಮಿಸಬೇಕು. ಕಾಮಗಾರಿ ಒಮ್ಮೆ ಆರಂಭವಾದರೆ ಅದು ಹಂತ ಹಂತವಾಗಿ ಅಭಿವೃದ್ದಿ ಕಾಣುತ್ತದೆ. ಸ್ವಂತ ಮನೆ ಕಟ್ಟಿದಷ್ಟೆ ಆಸಕ್ತಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಟ್ಟಡ ನಿರ್ಮಿಸಬೇಕು. ಹರೇಕಳ ಡ್ಯಾಂ ನಿರ್ಮಾಣದ ಪ್ರಸ್ತಾವನೆ ಬಂದಾಗ ಅದು ಆಗುವುದು ಸಾಧ್ಯವೇ ಎಂದು ಕೆಲವರು ಆಡಿಕೊಳ್ಳುತ್ತಿದ್ದರು. ಅಸಾಧ್ಯ ಕಾಮಗಾರಿಗಳನ್ನ ಸಾಧ್ಯವಾಗಿಸೋದೆ ನನ್ನ ಗುರಿ ಎಂದರು. ಹರೇಕಳ ಡ್ಯಾಂ ಕಮ್ ಸೇತುವೆ ಲೋಕಾರ್ಪಣೆ ಆದ ಮೇಲೆ ಹರೇಕಳ ಗ್ರಾಮಸ್ಥರಿಗೆ ಮಂಗಳೂರು ನಗರ ಹತ್ತಿರವಾಗಲಿದೆ. ಪ್ರಯಾಣ ಬಹಳ ಸಲೀಸಾಗಲಿದೆ ಎಂದರು.





ಮಾಜಿ ತಾಪಂ ಸದಸ್ಯ ಮುಸ್ತಾಫ ಹರೇಕಳ ಮಾತನಾಡಿ ಹರೇಕಳ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡವು ಹಳೆಯದಾಗಿದ್ದು ಸ್ಥಳಾವಕಾಶದ ಕೊರತೆ ಇರುವುದರಿಂದ ಗ್ರಾಮಸಭೆ ಮತ್ತು ಇತರ ಸಭೆಗಳನ್ನು ನಡೆಸಲು ಅಸಾಧ್ಯವಾಗಿದೆ. ಹಾಗೆಯೇ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮಸ್ಥರ ಅಭಿಪ್ರಾಯದಂತೆ ಹರೇಕಳ ಗ್ರಾಮ ಪಂಚಾಯಿತಿಗೆ ಹರೇಕಳದ ಉಲ್ಲಾಸ ನಗರದಲ್ಲಿ 50 ಸೆಂಟ್ಸ್ ಸ್ಥಳದಲ್ಲಿ 5000 ಚದರಡಿಯ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಯೋಜನೆ ಹಾಕಲಾಗಿದೆ ಎಂದರು.
ಹರೇಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಬದ್ರುದ್ದೀನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹಾಜಬ್ಬ , ಧಾರ್ಮಿಕ ಗುರು ಸಯ್ಯದ್ ಸರ್ಫುದ್ದೀನ್ ತಂಞಳ್, ರೆ.ಫಾ. ಜಾನ್, ಕುತ್ತಿಮುಗೇರ್ ದೇವಸ್ಥಾನದ ಮೋಹನ್ ಕೆ, ಹರೇಕಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕಲ್ಯಾಣಿ, ಮಾಜಿ ಅಧ್ಯಕ್ಷರಾದ ಮಹಾಬಲ ಹೆಗ್ಡೆ, ಅನಿತಾ ಡಿಸೋಜ, ಗುಲಾಬಿ, ಶಾಲಿ, ಸಂತೋಷ್ ಶೆಟ್ಟಿ ಅಸೈಗೋಳಿ, ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು, ರಾಮ್ ದಾಸ್ ಪೂಂಜ, ರಿಚರ್ಡ್, ಆದಂ ಸಾಹೇಬ, ಲತೀಫ್, ಎಸ್, ಮಹಮ್ಮದ್, ಇದ್ದಿನ್ ಕುಂಞಿ, ರವೀಂದ್ರ ರೈ ಹರೇಕಳ, ನಾಗರಾಜ್, ರಾಧಾಕೃಷ್ಣ ರೈ, ಅಬ್ದುಲ್ ಮಜೀದ್ ,ತ್ಯಾಗಂ ಹರೇಕಳ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು.
I do things that are impossible says UT Khader in Ullal while laying foundation of Harekala Dam.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm