ಬ್ರೇಕಿಂಗ್ ನ್ಯೂಸ್
17-08-21 08:44 pm Richard, Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ಕೊರೊನಾ ಭಯದಲ್ಲಿ ಸಾವಿಗೆ ಶರಣಾಗಿರುವ ದಂಪತಿಯ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಉಸಿರಾಟದ ತೊಂದರೆ, ಬ್ಲಾಕ್ ಫಂಗಸ್ ಕಂಡುಬಂದಿದ್ದರೂ, ಮೂರೇ ತಿಂಗಳಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಿತ್ತು. ಸೋಂಕು ಕಡಿಮೆಗೊಂಡು ಜನಜೀವನ ಸಹಜಸ್ಥಿತಿಗೆ ಬರುತ್ತಿರುವಾಗಲೇ ದಂಪತಿ ಈ ರೀತಿಯಾಗಿ ಸಾವು ಕಂಡಿರುವುದು ಕರಾವಳಿ ಜನರ ಮನಸ್ಸನ್ನು ಕಲಕಿಬಿಟ್ಟಿದೆ.
ಪಡುಬಿದ್ರಿ ಮೂಲದ ರಮೇಶ್ ಸುವರ್ಣ (45) ಬಿಸಿನೆಸ್ ಮಾಡುತ್ತಿದ್ದರು. ಕೊರೊನಾ ಕಾರಣದಿಂದ ಅವರಿಗೇನೂ ದೊಡ್ಡ ನಷ್ಟ ಆಗಿಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ. ಮದುವೆಯಾಗಿ 21 ವರ್ಷ ಆಗಿದ್ದರೂ ಮಕ್ಕಳಾಗಿಲ್ಲ ಎಂಬ ಕೊರಗಿನ ಮಧ್ಯೆ ಪತ್ನಿಯ ಅನಾರೋಗ್ಯದ ಬಗ್ಗೆ ಚಿಂತೆ ಮಾಡಿದ್ದಾರೆ. ಆಕೆಯಿಲ್ಲದೇ ಬದುಕಲು ಸಾಧ್ಯವಿಲ್ಲ. ಆಕೆಗೆ ಕೊರೊನಾ ಬಂದಿದ್ದು ಆಸ್ಪತ್ರೆಗೆ ದಾಖಲಿಸಿದರೂ ಬದುಕಲ್ಲ. ಹೀಗಾಗಿ ಸಾವಿಗೆ ಶರಣಾಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಅಲ್ಲದೆ, ಸಾಯುವುದಕ್ಕಾಗಿ ನಿದ್ದೆ ಮಾತ್ರೆ ಸೇವಿಸಿದ್ದನ್ನೂ ವಾಯ್ಸ್ ಮೆಸೇಜ್ ನಲ್ಲಿ ಹೇಳಿದ್ದಾರೆ. ಪತ್ನಿ ಸಾವಿಗಾಗಿ 42 ನಿದ್ದೆ ಮಾತ್ರೆಗಳನ್ನು ಸೇವಿಸಿದ್ದಾಳೆ. ಇದರಿಂದಾಗಿ ರಕ್ತ ವಾಂತಿ ಮಾಡಿದ್ದಾಳೆ. ಆದರೂ ಸಾಯಲಿಲ್ಲ. ರಾತ್ರಿ ಒಮ್ಮೆ ಪ್ರಜ್ಞೆ ತಪ್ಪಿದ ಸ್ಥಿತಿಗೆ ಹೋಗಿದ್ದಳು. ಆನಂತರವೂ ಸಾಯಲಿಲ್ಲ ಎಂದು ನೇಣಿಗೆ ಶರಣಾಗಲು ಯತ್ನಿಸಿದ್ದಾಳೆ. ಆದರೆ, ಬಟ್ಟೆಯ ಶಾಲು ಕಡಿದುಕೊಂಡು ಅರ್ಧ ಜೀವಕ್ಕೆ ಹೋಗಿದ್ದಳು. ಆಮೇಲೆ ಬೇರೆ ಶಾಲನ್ನು ಹಾಕಿ, ಸಾವಿಗೀಡಾಗಿದ್ದಾಳೆ. ಸಾಯುವುದಕ್ಕೂ ಇಷ್ಟು ಕಷ್ಟ ಇದೆಯೆಂದು ಗೊತ್ತಿರಲಿಲ್ಲ ಎಂದು ಪೊಲೀಸ್ ಕಮಿಷನರ್ ಗೆ ಕಳಿಸಿರುವ ಆಡಿಯೋದಲ್ಲಿ ರಮೇಶ್ ಸುವರ್ಣ ಅತ್ತುಕೊಂಡು ಹೇಳಿರುವುದು ದಾಖಲಾಗಿದೆ.
ಅವಳಿಗೆ ಕೊರೊನಾ ಬಂದು ಏನೆಲ್ಲಾ ಕಷ್ಟಪಡುತ್ತಿದ್ದಾಳೆ, ನೋಡಿದ್ದೇನೆ. ಒಂದೂವರೆ ದಿನ ಆಯ್ತು ಊಟ ಮಾಡದೆ. ರಾತ್ರಿಯಲ್ಲಿ ನಿದ್ದೆ ಬರದೆ ವೆರಾಂಡಾಕ್ಕೆ ಹೋಗಿ ಗಾಳಿ ಸೇವಿಸುತ್ತಿದ್ದಳು. ಉಸಿರುಕಟ್ಟಿದ ರೀತಿ ಮಾಡುತ್ತಿದ್ದಳು. ಇದರಿಂದ ತುಂಬ ಬೇಸರವಾಗಿತ್ತು. ನಾವು ಹೀಗೆ ಸಾಯುತ್ತಿರುವುದು ತಪ್ಪು. ಇಂಥದನ್ನು ನಾನು ಯಾವತ್ತು ಒಪ್ಪುತ್ತಿರಲಿಲ್ಲ. ಆದರೆ, ಈಗಿನ ಪರಿಸ್ಥಿತಿ ನಮಗೆ ಇಂಥಾ ಸ್ಥಿತಿ ತಂದಿಟ್ಟಿದೆ. ಆಕೆಯ ಪ್ರಾಣ ಹೋಗಿದೆ, ಇನ್ನು ನಾನೂ ಸಾಯುತ್ತೇನೆ. ಆಕೆಯಿಲ್ಲದಿದ್ದರೆ ನಾನು ಹೇಗಿರೋದು, ನಾನಿಲ್ಲದಿದ್ದರೆ ಆಕೆ ಹೇಗೆ ಇರೋದು ಎಂಬ ಚಿಂತೆಯಲ್ಲೇ ಇದ್ದೆವು. ಹಾಗಾಗಿ ಒಟ್ಟಿಗೆ ಸಾಯಲು ನಿರ್ಧರಿಸಿದೆವು. ಆದರೆ, ನಮ್ಮನ್ನು ಹಿಂದು ಸಂಪ್ರದಾಯದಲ್ಲೇ ಅಂತ್ಯಕ್ರಿಯೆ ಮಾಡಿ ಎಂದು ಹಿಂದು ಸಂಘಟನೆಯ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ಐದಾರು ವಾಯ್ಸ್ ಮೆಸೇಜನ್ನು ಪೊಲೀಸ್ ಕಮಿಷನರ್ ಒಬ್ಬರಿಗೇ ಕಳಿಸಿದ್ದಾರೆ. ಆನಂತರ ಶರಣ್ ಪಂಪ್ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರಿಗೂ ವಾಯ್ಸ್ ಮೆಸೇಜ್ ಮಾಡಿದ್ದು, ಅಂತ್ಯಕ್ರಿಯೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಸುದೀರ್ಘ ಸಂದೇಶದ ಉದ್ದಕ್ಕೂ ನೋವು, ದುಃಖ ಮತ್ತು ಕೊರೊನಾದ ಬಗೆಗಿರುವ ಭಯವನ್ನು ಹೇಳಿಕೊಂಡಿದ್ದಾರೆ. ಅಲ್ಲದೆ, ಕೊರೊನಾ ಸೋಂಕು ಆವರಿಸಿಕೊಳ್ಳುತ್ತಿದೆ ಎನ್ನುವ ಚಿಂತೆಯಿಂದಲೇ ರಮೇಶ್ ಸುವರ್ಣ ಸ್ವತಃ ಉದ್ವೇಗಕ್ಕೊಳಗಾಗಿ ಉಸಿರಾಟದ ಸಮಸ್ಯೆಗೆ ಈಡಾಗಿದ್ದರು ಎಂಬುದು ಅವರ ಮಾತುಗಳಲ್ಲಿ ಕಂಡುಬರುತ್ತಿದ್ದವು.


ಕೊರೊನಾ ಭಯ ಮಾತ್ರ, ಸೋಂಕು ಇರಲಿಲ್ಲ !
ದುರಂತ ಅಂದ್ರೆ, ಯಾವ ಕೊರೊನಾ ಸೋಂಕಿಗಾಗಿ ಸಾಯಲು ನಿರ್ಧರಿಸಿದ್ದರೋ, ಅವರಿಗೆ ಕೊರೊನಾ ಸೋಂಕೇ ಇರಲಿಲ್ಲ ಎಂಬ ವರದಿಯನ್ನು ಪರೀಕ್ಷೆ ನಡೆಸಿದ ವೈದ್ಯರು ನೀಡಿದ್ದಾರೆ. ಶವಗಳನ್ನು ವೆನ್ಲಾಕ್ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಂ ನಡೆಸಲಾಗಿದೆ. ಹಿಂದು ಸಂಘಟನೆಯ ಶರಣ್ ಪಂಪ್ವೆಲ್ ಸೇರಿದಂತೆ ಹಲವಾರು ಮಂದಿ ಬೆಳಗ್ಗೆಯೇ ಚಿತ್ರಾಪುರಕ್ಕೆ ಬಂದಿದ್ದರು. ಆನಂತರ ಕೋವಿಡ್ ನೆಗೆಟಿವ್ ಎಂದು ವರದಿ ಬರುತ್ತಲೇ ರಮೇಶ್ ಸುವರ್ಣ ಮನೆಯವರು ಕೂಡ ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದರು.
ಕೊರೊನಾ ಸೋಂಕಿನ ಭಯದಲ್ಲಿ ದಂಪತಿ ಸಾವಿಗೆ ಶರಣು ! ಪೊಲೀಸ್ ಕಮಿಷನರ್ ಗೆ ಕರೆ ಮಾಡಿ ದುರಂತ ಅಂತ್ಯ !
In a tragic incident, a couple committed suicide at their apartment due to fear of Covid 19 in Baikampady, Mangalore here on August 17. The deceased have been identified as Ramesh Suvarna (45) and his wife Guna Suvarna from Baikampady. It is said that the wife consumed 42 sleeping tablets but didn't work for which they hang to the fan.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm