ಬ್ರೇಕಿಂಗ್ ನ್ಯೂಸ್
19-08-21 10:42 am Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಆಗಸ್ಟ್ 19: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಯೂ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಕಟಣೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆ ನಡೆಸದಂತೆ ಸೂಚನೆ ನೀಡಿದ್ದರು. ಇದರಂತೆ, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ತನಕ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆ, ವಿಧಿಗಳು ನಡೆಯುವುದಿಲ್ಲ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15- 1.30 ಹಾಗೂ 2.30 ರಿಂದ ಸಂಜೆ ಏಳರ ತನಕ ಭಕ್ತರು ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ.
ಅಲ್ಲದೆ, ಇತರ ದಿನಗಳಲ್ಲಿ ಉಳಿದುಕೊಳ್ಳುವ ಭಕ್ತರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
Spike in Covid-19 cases kukke subramanya temple to close all its services till August 30th.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm