ಬ್ರೇಕಿಂಗ್ ನ್ಯೂಸ್
20-08-21 06:01 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 20: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ, ಸ್ವಾಗತ ಕೋರಿದ ವಿಚಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಈ ರೀತಿ ವರ್ತನೆ ತೋರಿದ್ದು ತಪ್ಪು. ಅದರ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಖಾಸಗಿ ಕಾರ್ಯ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರಲ್ಲಿ ಈ ಕುರಿತು ಪ್ರಶ್ನೆ ಮಾಡಿದಾಗ, ನಮ್ಮ ಮಲೆನಾಡು ಭಾಗ ಮತ್ತು ಕೊಡಗಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿ ಇದೆ. ಹಾಗೆಂದು ಈ ರೀತಿ ಮಾಡೋದು ಸರೀನಾ ಅಂದರೆ ಖಂಡಿತ ತಪ್ಪು ಎನ್ನುತ್ತೇನೆ. ಅಲ್ಲಿನ ಜನ ಖುಷಿಗೂ ಮಾಡುತ್ತಾರೆ, ದುಃಖದ ಸಂದರ್ಭದಲ್ಲಿಯೂ ಮಾಡುತ್ತಾರೆ. ಸಾರ್ವಜನಿಕವಾಗಿ ಈ ರೀತಿ ಮಾಡಿದ್ದು ತಪ್ಪು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಕನ್ನಡಿಗರನ್ನು ರಕ್ಷಿಸಿ ಕರೆತರುವ ನಿಟ್ಟಿನಲ್ಲಿ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ. ಸಿಐಡಿಯಲ್ಲಿ ಎಡಿಜಿಪಿ ಆಗಿರುವ ಉಮೇಶ್ ಕುಮಾರ್, ಈ ಹಿಂದೆ ವಿದೇಶದಲ್ಲಿ ಸಂಕಷ್ಟದಲ್ಲಿದ್ದವರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ. ಕಷ್ಟಕ್ಕೆ ಒಳಗಾದವರು ಅವರನ್ನು ಸಂಪರ್ಕಿಸಬಹುದು. ರಾಜ್ಯದಿಂದ ಉಮೇಶ್ ಕುಮಾರ್ ನೋಡಲ್ ಅಧಿಕಾರಿ ಆಗಿರುತ್ತಾರೆ ಎಂದು ಹೇಳಿದರು.
ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆ ಮಾಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪಿಸುವ ವಿಚಾರದಲ್ಲಿ ಕೇಂದ್ರದ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.
Karnataka Home Minister Araga Jnanendra says have appealed central govt for NIA office in Mangaluru. In order to rescue stranded people from Karnataka a Nodal officer also have been appointed.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm