ಬ್ರೇಕಿಂಗ್ ನ್ಯೂಸ್
21-08-21 01:19 pm Mangaluru Correspondent ಕರಾವಳಿ
ಕತಾರ್, ದೋಹಾ, ಆಗಸ್ಟ್ 21: ಇತ್ತೀಚೆಗೆ ಕತಾರ್ ವಿಶ್ವವಿದ್ಯಾಲಯದಿಂದ ಭಾರತೀಯ ಮೂಲದ ಮಹಿಳೆ, ಹರ್ಷಿತಾ ಶೈಲೇಶ್ ಅವರು ಗೌರವಾನ್ವಿತ ಪಿಎಚ್ಡಿ ಪದವಿ ಪಡೆದಿದ್ದಾರೆ. “Role of Protein Arginine Methyltransferase5 (PRMT5) in WNT/β-CATENIN" ಎಂಬ ಸ್ತನ ಕಾನ್ಸರ್ ಪ್ರಸರಣ ಸಂಕೇತಕ್ಕೆ ಸಂಬಂಧಪಟ್ಟ ಮಹಾ ಪ್ರಬಂಧಕ್ಕೆ ಈ ಗೌರವ ಸಂದಿದೆ.

ಕತಾರ್ ವಿಶ್ವವಿದ್ಯಾಲಯದ ಜೈವಿಕ ಮತ್ತು ಪರಿಸರ ವಿಜ್ಞಾನದ ವಿಭಾಗಸ್ಥ ಪ್ರೊಫೆಸರ್ ಸಯೀದ್ ಸಿಫ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಈ ಮೊದಲು 2020 ರ ಪದವಿ ಸಮಾರಂಭದಲ್ಲಿ ಹರ್ಷಿತಾ ಅವರು ಕತಾರ್ ಎಮಿರ್ ಶೇಖ್ ತಮೀಮ್ ಹಮದ್ ಬಿನ್ ಅಲ್ಥಾನಿಯವರ ಪತ್ನಿ ಹರ್ ಹೈನೆಸ್ ಶೇಖಾ ಜವಾಹರ್ ಬಿಂಟ್ ಹಮಾದ್ ಬಿನ್ ಸುಹೈಮ್ ಅಲ್ಥಾನಿ ಅವರಿಂದ ಚಿನ್ನದ ಪದಕವನ್ನು ಪಡೆದು ಶ್ರೇಷ್ಠ ಮಹಿಳಾ ಪದವಿ ವಿದ್ಯಾರ್ಥಿಯಾಗಿ ಹೊರಹೊಮ್ಮಿದ್ದರು.
ಹರ್ಷಿತಾ, ಕರ್ನಾಟಕ ರಾಜ್ಯದ ಕಾರ್ಕಳದ ತಾಲೂಕಿನ ಸಣ್ಣ ಪಟ್ಟಣದಿಂದ ಬಂದವರು. ಬಾಲ್ಯದಿಂದಲೇ ಅತ್ಯುತ್ತಮ ಸಾಧಕಿಯಾಗಿದ್ದ ಆಕೆ ತನ್ನ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ವಿಜೇತೆ. ಮಂಗಳೂರಿನ ವಿಶ್ವವಿದ್ಯಾನಿಲಯದಿಂದ ಬಯೋಟೆಕ್ನಾಲಜಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ್ದರು. ನಂತರ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಆಬಳಿಕ ಕತಾರ್ ವಿಶ್ವವಿದ್ಯಾಲಯಕ್ಕೆ ಸೇರಿದ್ದು ಪಿಎಚ್ಡಿ ಮುಗಿಸಿದ್ದಾರೆ.

ಪಿಎಚ್ಡಿ ಆಕ್ರಮಣಕಾರಿ ಸ್ತನ ಕ್ಯಾನ್ಸರ್ ಕೋಶಗಳ ಪ್ರಸರಣ ಮತ್ತು ಬೆಳವಣಿಗೆಯಲ್ಲಿ ಪಿಆರ್ಎಂಟಿ 5 ಪ್ರಮುಖ ಎಪಿಜೆನೆಟಿಕ್ ಕಿಣ್ವದ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ಅಧ್ಯಯನವು ಕೇಂದ್ರೀಕರಿಸಿದೆ. ಅವರ ವ್ಯವಸ್ಥಿತ ಅಧ್ಯಯನವು PRMT5 ಅಭಿವ್ಯಕ್ತಿಯು ಆಕ್ರಮಣಕಾರಿ ಸ್ತನ ಕ್ಯಾನ್ಸರ್ಗಳ ಪೈಕಿ ಹೆಚ್ಚಿದೆ ಎಂದು ತೋರಿಸಿದೆ. ಅಧ್ಯಯನದಿಂದ ಕಂಡುಕೊಂಡ ಅಂಶಗಳು ವಿಶ್ವದಾದ್ಯಂತ ಆಕ್ರಮಣಕಾರಿ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವ ಜನರಿಗೆ ಒಂದು ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಪ್ರಮುಖ ಅಡಿಪಾಯವಾಗಿದೆ. ಇವರ ಸಂಶೋಧನಾ ಪ್ರಬಂಧ ಜಾಗತಿಕ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
Harshitha from karkala gets Phd by Qatar University in Qatar.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am