ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm