ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am