ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm