ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm