ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am