ಬ್ರೇಕಿಂಗ್ ನ್ಯೂಸ್
26-08-21 08:32 pm Mangaluru Correspondent ಕರಾವಳಿ
ಮಂಗಳೂರು, ಆ.26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್ ಕೆ, ಕಾಲೇಜು ಶಿಕ್ಷಣ ವಿಶೇಷಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore DC orders not to start Graduate and Postgraduate classes offline till Sep 15th
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm