ಬ್ರೇಕಿಂಗ್ ನ್ಯೂಸ್
06-09-20 09:16 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 06: ದ.ಕ. ಜಿಲ್ಲೆಯಲ್ಲಿ ಕೊರೋನ ಹಾವಳಿ ಮಿತಿಮೀರಿದ್ದು, ರವಿವಾರ ಮತ್ತೆ 326 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
ಸೋಂಕಿತರ ಪೈಕಿ ಮಂಗಳೂರು ತಾಲೂಕು ಅಗ್ರಸ್ಥಾನದಲ್ಲಿದೆ. ಮಂಗಳೂರು-187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm