ಬ್ರೇಕಿಂಗ್ ನ್ಯೂಸ್
27-08-21 03:10 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಆಹಾರ ತಯಾರಿ ಕೇಂದ್ರಗಳಲ್ಲಿ ಮಿತಿಗಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುವುದು ಪತ್ತೆಯಾದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆಹಾರ ಸುರಕ್ಷತೆ ವಿಚಾರದಲ್ಲಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ. ಗೋಬಿ ಮಂಚೂರಿ ಸೇರಿದಂತೆ ಚೈನೀಸ್ ಐಟಂ ತಯಾರಿ ಕೇಂದ್ರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿದೆ. ಇದರಿಂದ ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಎಲ್ಲ ಕಡೆ ದಾಳಿ ನಡೆಸಬೇಕು. ಫುಡ್ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ಗುಣಮಟ್ಟ ಖಾತ್ರಿ ಮಾಡಬೇಕು. ಯಾವುದೇ ರೀತಿಯಲ್ಲಿ ಆಹಾರ ಗುಣಮಟ್ಟದಲ್ಲಿ ಕೊರತೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.



ಅಲ್ಲದೆ, ಟೇಸ್ಟಿಂಗ್ ಪೌಡರನ್ನು ಪರವಾನಗಿ ಇಲ್ಲದೆ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬೇಕರಿ ಇನ್ನಿತರ ಆಹಾರ ತಯಾರಿ ಕೇಂದ್ರಗಳಿಗೆ ಪ್ರತಿ ತಿಂಗಳು ದಾಳಿ ನಡೆಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಬೇಕರಿ ತಿಂಡಿ, ತಿನಿಸುಗಳ ಪ್ಯಾಕೆಟ್ ಗಳಲ್ಲಿ ಬಳಕೆಯ ಅವಧಿ ಬಗ್ಗೆ ನಮೂದೆ ಮಾಡಲಾಗಿದೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಬೇಕರಿ ಇನ್ನಿತರ ಆಹಾರ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಣ್ಣು, ತರಕಾರಿಗಳ ಕೆಮಿಕಲ್ ಬಳಕೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು. ಬಾಳೆಹಣ್ಣು ಇನ್ನಿತರ ಹಣ್ಣುಗಳ ಹೋಲ್ ಸೇಲ್ ವ್ಯಾಪಾರಿಗಳು ಕೆಮಿಕಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಅಂಥ ವ್ಯಾಪಾರಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ಉಪಸ್ಥಿತರಿದ್ದರು.
Deputy commissioner (DC) G Jagadeesha warned that a criminal case will be filed against food manufacturers if it is found that they are using excessive amounts of tasting powder in any kind of food manufacture.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am