ಬ್ರೇಕಿಂಗ್ ನ್ಯೂಸ್
07-09-20 03:00 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಸ್ಯಾಂಡಲ್ ವುಡ್ ಡ್ರಗ್ ನಂಟು ರಾಜ್ಯದಾದ್ಯಂತ ವ್ಯಾಪಕ ಆಗಿರುವ ಸೂಚನೆ ಕಂಡುಬರುತ್ತಿದ್ದಂತೆಯೇ ಪೊಲೀಸರು ಎಲರ್ಟ್ ಆಗಿದ್ದಾರೆ. ಮಂಗಳೂರಿನಲ್ಲಿ ಇಂದು ಡ್ರಗ್ ಸೇವನೆ, ವಹಿವಾಟು ನಡೆಸುವ ಹಿನ್ನೆಲೆ ಇದ್ದವರನ್ನು ಕರೆಸಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಖುದ್ದಾಗಿ ವಾರ್ನ್ ಮಾಡಿದ್ದಾರೆ. ಇನ್ಮುಂದೆ ಡ್ರಗ್ ಪೆಡ್ಲರ್ ಆಗಿರೋದು ಕಂಡುಬಂದರೆ ಗೂಂಡಾ ಏಕ್ಟಿನಡಿ ಬಂಧಿಸಿ ಗಡೀಪಾರು ಮಾಡುವ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಗ್ರೌಂಡಿನಲ್ಲಿ ನಡೆದ ಪರೇಡ್ ನಲ್ಲಿ ನೂರಕ್ಕೂ ಹೆಚ್ಚು ಮಂದಿ ಸೇರಿದ್ದರು. ರೌಡಿಸಂ, ಡ್ರಗ್ ಸೇವನೆ ಮತ್ತು ಡ್ರಗ್ಸ್ ವಹಿವಾಟು ನಡೆಸುವ ಹಿನ್ನೆಲೆ ಇದ್ದು ಪೊಲೀಸ್ ಕೇಸು ಎದುರಿಸುತ್ತಿದ್ದವರನ್ನು ನೋಟೀಸ್ ನೀಡಿ ಕರೆಸಲಾಗಿತ್ತು. ಒಬ್ಬೊಬ್ಬರನ್ನೇ ಕರೆದು ಎಚ್ಚರಿಕೆ ನೀಡಿದ ಕಮಿಷನರ್, ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ರು.



ಬೆಂಗಳೂರು ಡ್ರಗ್ ಪ್ರಕರಣ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಡ್ರಗ್ಸ್ ವಹಿವಾಟು ಮೇಲೆ ನಿಗಾ ಇಟ್ಟಿದ್ದೇವೆ. ಅಂತಾರಾಜ್ಯ ಸಾಗಾಟ ಜಾಲ ಮತ್ತು ಪೂರೈಕೆ ಮಾಡುತ್ತಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದೇವೆ. ಇನ್ಮುಂದೆ ಡ್ರಗ್ ಸೇವಿಸಿ ಅಥವಾ ವಹಿವಾಟು ಮಾಡೋದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ತೀವಿ. ಪದೇ ಪದೇ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದರೆ ಅಂಥವರ ವಿರುದ್ಧ ಗೂಂಡಾ ಏಕ್ಟ್ ಪ್ರಯೋಗ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳದಿಂದ ಡ್ರಗ್ ಸಪ್ಲೈ ಇರೋದು ಇಲಾಖೆಯ ಗಮನಕ್ಕೆ ಬಂದಿದೆ. ಡ್ರಗ್ ಸರಬರಾಜು ಸೀರಿಯಸ್ ಇಶ್ಯು ಆಗಿದ್ದು ನಿಗಾ ಇಡೋದಕ್ಕೆ ಕ್ರಮ ತಗೊಂಡಿದ್ದೇವೆ ಎಂದು ಹೇಳಿದರು.
ಇನ್ನು ಬೆಂಗಳೂರು ಡ್ರಗ್ಸ್ ಪ್ರಕರಣ ಸಂಬಂಧಿಸಿ ಮಂಗಳೂರಿನಲ್ಲಿ ಯಾರನ್ನಾದ್ರೂ ವಶಕ್ಕೆ ತಗೊಂಡಿದ್ದೀರಾ ಎಂಬ ಪ್ರಶ್ನೆಗೆ, ಅಂಥ ಯಾವುದೇ ವಿಚಾರಣೆ ನಡೆದಿಲ್ಲ. ಬೆಂಗಳೂರು ಪ್ರಕರಣ ಸಂಬಂಧಿಸಿ ಅಲ್ಲಿನ ಪೊಲೀಸರೇ ತನಿಖೆ ನಡೆಸುತ್ತಾರೆ. ಆ ಬಗ್ಗೆ ನಾವೇನು ಹೇಳೋಕೆ ಬರಲ್ಲ ಎಂದಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm