ಬ್ರೇಕಿಂಗ್ ನ್ಯೂಸ್
03-09-21 03:31 pm Mangaluru Correspondent ಕರಾವಳಿ
ಉಳ್ಳಾಲ, ಸೆ.3: ದ್ವಿಚಕ್ರ ವಾಹನಗಳಿಗೂ ಚಲಿಸಲಾಗದ ಸ್ಥಿತಿಯಲ್ಲಿ ಕೆಟ್ಟು ಕೆರ ಹಿಡಿದಿದ್ದ ಕುಂಪಲ ಸರಳಾಯ ಕಾಲನಿ ಮುಖ್ಯ ರಸ್ತೆಗೆ ಕೊನೆಗೂ ಕಾಯಕಲ್ಪ ದೊರಕಿದ್ದು ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಯು.ಟಿ. ಖಾದರ್ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.
ಕುಂಪಲ ಸರಳಾಯ ಕಾಲನಿ ಮಧ್ಯಮ ವರ್ಗದ ಜನರೇ ಹೆಚ್ಚು ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶವಾಗಿದೆ. ಹಿಂದೆಯೂ ಈ ಕಾಲನಿಯ ಅಡ್ಡ ರಸ್ತೆಗಳು ನಾದುರಸ್ಥಿಯಲ್ಲಿದ್ದಾಗ ಇಲ್ಲಿನ ಪ್ರದೇಶವಾಸಿಗಳು ಸರಕಾರದ ಅನುದಾನವನ್ನ ಕಾಯದೆ ಸ್ವಂತ ಹಣವನ್ನೇ ಒಗ್ಗೂಡಿಸಿ ಸುಸಜ್ಜಿತ ಕಾಂಕ್ರೀಟ್ ಅಡ್ಡ ರಸ್ತೆಗಳನ್ನು ತಾವೇ ನಿರ್ಮಿಸಿ ಸುದ್ದಿಯಾಗಿದ್ದರು.
ಸರಳಾಯ ಕಾಲನಿಯಿಂದ ಪಿಲಾರು ಪಲ್ಲ ಸಂಪರ್ಕದ ಮುಖ್ಯ ರಸ್ತೆಯು ಕಳೆದ ಹಲವಾರು ವರುಷಗಳಿಂದ ನಡೆಯಲೂ ಯೋಗ್ಯವಿಲ್ಲದ ಕಚ್ಛಾ ರಸ್ತೆಯಾಗಿಯೇ ಉಳಿದಿತ್ತು. ಈ ರಸ್ತೆಗಳಿಂದ ಸಂಚರಿಸುವ ದ್ವಿಚಕ್ರ ವಾಹನಗಳು ರಸ್ತೆ ನಡುವಿನ ಹೊಂಡಗಳಿಗೆ ಸಿಲುಕಿ ಪಲ್ಟಿ ಹೊಡೆಯುತ್ತಾ ಸಾಗುತ್ತಿದ್ದವು.






ರಸ್ತೆಯ ದುಸ್ಥಿಯನ್ನ ಅವಲೋಕಿಸಿದ್ದ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರು ಕಾಂಕ್ರಿಟೀಕರಣಕ್ಕೆ ತಕ್ಷಣ ಅನುದಾನ ಮಂಜೂರು ಮಾಡಿದ್ದಾರೆ. ಇಂದು ನೂತನ ಕಾಂಕ್ರಿಟೀಕರಣ ಕಾಮಗಾರಿಗೆ ಅವರು ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ನೂತನವಾಗಿ ನಿರ್ಮಾಣವಾಗುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುಣಮಟ್ಟವನ್ನ ಸ್ಥಳೀಯರೇ ಅಳೆಯುವಂತಾಗಬೇಕು. ರಸ್ತೆಯು ಮೂವತ್ತು ವರ್ಷಗಳ ಬಳಕೆಗೆ ಯೋಗ್ಯವಿರುವಂತೆ ಗುಣಮಟ್ಟವನ್ನು ಗುತ್ತಿಗೆದಾರರು ಕಾಯ್ದುಕೊಳ್ಳಬೇಕು. ಕಾಂಕ್ರೀಟ್ ರಸ್ತೆಯ ಗುಣ ಮಟ್ಟಕ್ಕೆ ಕುಂಪಲ - ಚೇತನನಗರ ಮುಖ್ಯ ರಸ್ತೆಯೆ ಮಾದರಿ ಎಂದರು. ರಸ್ತೆ ನಿರ್ಮಾಣದ ವೇಳೆ ಸ್ಥಳೀಯರು ತಾಳ್ಮೆ ವಹಿಸಿದಲ್ಲಿ ಅತ್ಯುತ್ತಮ ರಸ್ತೆ ನಿರ್ಮಾಣವಾಗಲಿದೆ ಎಂದರು.
ಇದೇ ವೇಳೆ ಕುಂಪಲ ಆಶ್ರಯ ಕಾಲನಿಯಲ್ಲಿ ನಿರ್ಮಾಣಗೊಂಡ ನೂತನ ಇಂಟರ್ ಲಾಕ್ ರಸ್ತೆಯನ್ನೂ ಅವರು ಉದ್ಘಾಟಿಸಿದರು.ಪ್ರಮುಖರಾದ ಶ್ರೀಧರ ಆಳ್ವ, ಸದಾಶಿವ ಉಳ್ಳಾಲ್, ದಿನೇಶ್ ಕುಂಪಲ, ದೇವೇಶ ಸರಳಾಯ, ನಳಿನಿ, ಸೋಮೇಶ್ವರ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಪುರುಷೋತ್ತಮ ಶೆಟ್ಟಿ ಪಿಲಾರ್, ದೀಪಕ್ ಪಿಲಾರ್, ಉದಯಗಟ್ಟಿ ಪಿಲಾರ್, ಮುಖಂಡರಾದ ಸತೀಶ್ ಉಳ್ಳಾಲ್, ವಿನೋದ್, ಎ.ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.
Kumpala colony in ullal road concrete work to begin and inauguration.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm