ಬ್ರೇಕಿಂಗ್ ನ್ಯೂಸ್
03-09-21 10:22 pm Mangaluru Correspondent ಕರಾವಳಿ
ಮಂಗಳೂರು, ಸೆ.3 : ರಾಷ್ಟ್ರೀಯ ತನಿಖಾ ದಳದ ಕಚೇರಿ ಮಂಗಳೂರಿನಲ್ಲಿ ಆಗತ್ತೆ ಎನ್ನುವ ಸುದ್ದಿ ಹಬ್ಬುತ್ತಿರುವಾಗಲೇ ಆರ್ಥಿಕ ಅಪರಾಧಗಳ ಬಗ್ಗೆ ತನಿಖೆ ನಡೆಸುವ ಕೇಂದ್ರ ಸರಕಾರದ ಕಂದಾಯ ಇಲಾಖೆ ಅಧೀನದ ಜಾರಿ ನಿರ್ದೇಶನಾಲಯ (ಇಡಿ) ವಲಯ ಕಚೇರಿಯನ್ನು ಮಂಗಳೂರಿನಲ್ಲಿ ಸದ್ದಿಲ್ಲದೆ ಆರಂಭಿಸಲಾಗಿದೆ.
ನಗರದ ಕಂಕನಾಡಿಯಲ್ಲಿ ಉಪ ವಲಯ ಕಚೇರಿ ಸೆ.3 ರಿಂದಲೇ ಆರಂಭಗೊಂಡಿರುವ ಬಗ್ಗೆ ಇಡಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ವಲಯ ಕಚೇರಿ ಬೆಂಗಳೂರಿನಲ್ಲಿದ್ದು ಅದರ ಅಧೀನದಲ್ಲಿ ಉಪ ಕಚೇರಿಯನ್ನು ತೆರೆಯಲಾಗಿದ್ದು ಇದರ ವ್ಯಾಪ್ತಿ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡಿದೆ.

ಮಂಗಳೂರಿನ ಕಚೇರಿಯು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟ, ಹಾವೇರಿ, ಬೀದರ್, ಗುಲ್ಬರ್ಗ, ಬಿಜಾಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ವ್ಯಾಪ್ತಿಯನ್ನು ಹೊಂದಿರುತ್ತದೆ. ಇಷ್ಟೂ ಜಿಲ್ಲೆಗಳ ವ್ಯಾಪ್ತಿಗೆ ಡೆಪ್ಯುಟಿ ಡೈರೆಕ್ಟರ್ ಒಬ್ಬರನ್ನು ಮುಖ್ಯಸ್ಥನಾಗಿ ನೇಮಕ ಮಾಡಲಾಗಿದೆ. ಇವರು ಬೆಂಗಳೂರು ವಲಯ ಕಚೇರಿಯ ಅಧೀನದಲ್ಲಿ 15 ಜಿಲ್ಲೆಗಳ ವ್ಯಾಪ್ತಿಯಲ್ಲಿ ದಾಳಿ, ತನಿಖೆ ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ.
ಐಟಿ ಮತ್ತು ಇಡಿ ಪರಸ್ಪರ ಹತ್ತಿರದ ನಂಟನ್ನು ಹೊಂದಿರುವ ಪ್ರತ್ಯೇಕ ತನಿಖಾ ವಿಭಾಗ. ತೆರಿಗೆ ವಂಚನೆ ಇನ್ನಿತರ ಪ್ರಕರಣಗಳನ್ನು ಐಟಿ ಅಧಿಕಾರಿಗಳು ನಡೆಸಿದರೆ, ಯಾವುದೇ ಪ್ರಕರಣಗಳಲ್ಲಿ ಬೇಕಾಬಿಟ್ಟಿ ಹಣದ ವಹಿವಾಟು ನಡೆದಿದ್ದರೆ, ಆಮೂಲಕ ಕೋಟ್ಯಂತರ ರೂಪಾಯಿ ವಂಚನೆ ಆಗಿರೋದು ಮತ್ತು ಹಣದ ಮೂಲವನ್ನು ಪತ್ತೆ ಮಾಡುವುದು ಇಡಿ ಅಧಿಕಾರಿಗಳ ತನಿಖೆ ಆಗಿರುತ್ತದೆ. ಕರ್ನಾಟಕದಲ್ಲಿ ಬೆಂಗಳೂರಲ್ಲೇ ಕಚೇರಿ ಇದ್ದುಕೊಂಡು ಇಡೀ ರಾಜ್ಯ ವ್ಯಾಪ್ತಿಯಲ್ಲಿ ದಾಳಿ, ತನಿಖೆ ನಡೆಸಲಾಗುತ್ತಿತ್ತು. ಇದೀಗ ಉಪ ವಲಯ ಕಚೇರಿಯೆಂದು ರಾಜ್ಯದಲ್ಲಿ ಬೆಂಗಳೂರನ್ನು ಬಿಟ್ಟರೆ ಅತಿ ಹೆಚ್ಚು ವಾಣಿಜ್ಯ ವಹಿವಾಟು ನಡೆಯುವ ಮಂಗಳೂರಿನಲ್ಲಿ ಹೊಸತಾಗಿ ಆರಂಭಿಸಲಾಗಿದೆ. ಬಾಕಿ ಉಳಿದಿರುವ ಆರ್ಥಿಕ ಅಪರಾಧಗಳ ತನಿಖೆಗೆ ಇನ್ನಷ್ಟು ವೇಗ ಸಿಗಲಿದೆ ಎನ್ನಲಾಗುತ್ತಿದೆ.
The new sub-zonal office of Directorate of Enforcement, department of Revenue, government of India, started functioning at its office at Kankanady from Friday September 3. The sub zonal office will function under the Bengaluru zonal office. The Mangaluru sub-zonal office shall be headed by a deputy director.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 09:49 am
HK News Staffer
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am