ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm