ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm