ಬ್ರೇಕಿಂಗ್ ನ್ಯೂಸ್
05-09-21 06:02 pm Headline Karnataka News Network ಕರಾವಳಿ
ಪುತ್ತೂರು, ಸೆ.5 : ರೈಲ್ವೇ ಹಳಿಗೆ ಅಳವಡಿಸಿರುವ ಜಾಯಿಂಟ್ ಕ್ಲಿಪ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಸುಮಾರು ಒಂದು ತಿಂಗಳಿನಿಂದ ರೈಲು ಹಳಿಯಿಂದ ಕಬ್ಬಿಣದ ಕ್ಲಿಪ್ಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮಫ್ತಿಯಲ್ಲಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು.

ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಮಫ್ತಿಯಲ್ಲಿದ್ದ ರೈಲ್ವೇ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಒಂದು ಟಾಟಾ ಏಸ್ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರೋಪಿಗಳನ್ನು ಸಕಲೇಶಪುರ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ. ರೈಲು ಹಳಿಗೆ ಅಳವಡಿಸುವ ಎಂಟು ಆಕಾರದ ಜಾಯಿಂಟ್ ಕ್ಲಿಪ್ ಗಳನ್ನು ಕೆಲವರು ಸೇರಿಕೊಂಡು ವ್ಯವಸ್ಥಿತವಾಗಿ ಕಳವು ಮಾಡುತ್ತಿದ್ದರು. ಆದರೆ, ಈ ರೀತಿ ಜಾಯಿಂಟ್ ಗಳನ್ನು ತೆರವು ಮಾಡಿದಲ್ಲಿ ಹಳಿ ಬಿಗಿತ ಕಳಕೊಂಡು ಸಡಿಲವಾಗುತ್ತದೆ. ಇದರಿಂದ ರೈಲು ಹಳಿ ತಪ್ಪಿ ಉರುಳಿ ಬೀಳುವ ಸಾಧ್ಯತೆ ಇರುತ್ತದೆ. ಹೀಗಾಗಿ ರೈಲಿನ ಕ್ಲಿಪ್ ಕಳವು ಮಾಡುವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ವಿಧ್ವಂಸಕ ಕೃತ್ಯದ ಉದ್ದೇಶ ಇದರ ಹಿಂದಿತ್ತಾ ಅನ್ನುವುದರ ಬಗ್ಗೆ ತನಿಖೆ ನಡೆಸಲಿದ್ದಾರೆ.
Puttur Two arrested for stealing Railway track Join clips railway police take the case seriously. Police arrested the two after the public gave cops information after which police who came in civil dress caught the culprits read handed.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm