ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm