ಬ್ರೇಕಿಂಗ್ ನ್ಯೂಸ್
08-09-20 12:34 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 8: ಸಮುದ್ರ ಮಧ್ಯೆ ಕಾಣೆಯಾದರೆ ಯಾರಾದ್ರೂ ಬದುಕು ಬರೋದುಂಟೇ..? ಆದರೆ ಇಲ್ಲೂಬ್ಬ ಮೀನು ಕಾರ್ಮಿಕ ಸಮುದ್ರ ಮಧ್ಯೆ ಪರ್ಸೀನ್ ಬೋಟ್ ನಿಂದ ಮಿಸ್ಸಿಂಗ್ ಆಗಿದ್ದರೂ ಎರಡು ದಿನಗಳ ನಂತರ ಪವಾಡ ಸದೃಶ ಬದುಕಿ ಬಂದಿದ್ದಾನೆ. ಹೌದು.. ಆಯುಷ್ಯ ಇದ್ದರೆ ಸಮುದ್ರಕ್ಕೆ ಬಿದ್ದರೂ ಬದುಕಿ ಬರಬಹುದು ಎನ್ನುವ ಮಾತು ಬಂದಿದ್ದು ಇದಕ್ಕೇ ಇರಬೇಕು.
ಮಂಗಳೂರಿನ ಹಳೆ ಬಂದರಿನಿಂದ ತೆರಳಿದ್ದ ಫಾಲ್ಕನ್ ಹೆಸರಿನ ಪರ್ಸೀನ್ ಬೋಟ್ ಎರಡು ದಿನಗಳ ಹಿಂದೆ ಸಮುದ್ರ ಮಧ್ಯೆ ಮೀನಿಗೆ ಬಲೆ ಹಾಕುವ ಯತ್ನದಲ್ಲಿತ್ತು. ಈ ವೇಳೆ, ಪರ್ಸೀನ್ ಬೋಟಿನ ಜೊತೆಗಿರುವ ಡಿಂಗಿ ಹೆಸರಿನ ಸಣ್ಣ ಬೋಟಿನಲ್ಲಿ ಕುಳಿತು ಕಾರ್ಮಿಕ ಸುನಿಲ್ ಡಿಸೋಜ ಬಲೆ ವಿಸ್ತರಿಸಲೆಂದು ನೀರಿಗೆ ಇಳಿದಿದ್ದರು. ಆದರೆ ಈ ವೇಳೆ ಜೋರಾಗಿ ಗಾಳಿ ಬಂದಿದ್ದರಿಂದ ಡಿಂಗಿ ಬೋಟಿಗೆ ಕಟ್ಟಿದ್ದ ಹಗ್ಗ ಕಡಿದು ಹೋಗಿದೆ. ಡಿಂಗಿ ಬೋಟ್ ಕಾರ್ಮಿಕನ ಸಹಿತ ಗಾಳಿಯೊಂದಿಗೆ ತೇಲಿ ಹೋಗಿದ್ದು, ಪರ್ಸೀನ್ ಬೋಟಿನಿಂದ ಮಿಸ್ ಆಗಿತ್ತು. ಪರ್ಸೀನ್ ಬೋಟಿನಲ್ಲಿದ್ದ ಸಿಬಂದಿ ಸಮುದ್ರ ಮಧ್ಯೆ ಹುಡುಕಾಟ ನಡೆಸಿದ್ರೂ ಡಿಂಗಿ ಆಗಲೀ, ಅದರಲ್ಲಿದ್ದ ಕಾರ್ಮಿಕನಾಗಲೀ ಪತ್ತೆಯಾಗಿರಲಿಲ್ಲ. ಆನಂತ್ರ ಪರ್ಸೀನ್ ಬೋಟ್ ಮಂಗಳೂರು ಬಂದರಿಗೆ ಹಿಂತಿರುಗಿ ಬಂದಿತ್ತು.

ಎರಡು ದಿನಗಳ ಬಳಿಕ ಉಡುಪಿ ಜಿಲ್ಲೆಯ ಮಲ್ಪೆಯ ಟ್ರಾಲ್ ಬೋಟಿನವರು ಆಳಸಮುದ್ರ ಮೀನುಗಾರಿಕೆಯಿಂದ ಹಿಂತಿರುಗುತ್ತಿದ್ದಾಗ ಸಮುದ್ರ ಮಧ್ಯದಲ್ಲಿ ಪತ್ತೆಯಾದ ಡಿಂಗಿಯನ್ನು ಗಮನಿಸಿದ್ದು ಅದರಲ್ಲಿದ್ದ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ಗಾಳಿ ಬಂದ ದಿಕ್ಕಿನಲ್ಲಿ ಸಮುದ್ರ ಮಧ್ಯೆ ಚಲಿಸುತ್ತಾ ಹೋಗುತ್ತಿದ್ದ ಡಿಂಗಿ ಬೋಟಿನಲ್ಲಿ ಅನ್ನ, ನೀರು ಇಲ್ಲದೆ ಎರಡು ದಿನ ಕಳೆದ ಕಾರ್ಮಿಕನನ್ನು ಹಿಡಿದು ಮಲ್ಪೆ ಬಂದರಿಗೆ ಕರೆತಂದಿದ್ದಾರೆ. ಕಾರ್ಮಿಕ ಸುನಿಲ್ ಡಿಸೋಜನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಎರಡು ದಿನ ಕಳೆದಿದ್ದರಿಂದ ಸುನಿಲ್ ಜೀವಂತ ಬರುವುದು ಸಂಶಯ ಆಗಿತ್ತು. ಡಿಂಗಿ ಬೋಟ್ ಸಮುದ್ರ ಮಧ್ಯೆ ಮುಳುಗಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಆದರೆ, ಸುನಿಲ್ ಡಿಸೋಜ ಪವಾಡ ಸದೃಶ ಬದುಕಿ ಬಂದಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm