ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm