ಬ್ರೇಕಿಂಗ್ ನ್ಯೂಸ್
08-09-20 05:20 pm Mangalore Reporter ಕರಾವಳಿ
ಕಾಸರಗೋಡು, ಸೆಪ್ಟೆಂಬರ್ 8: ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಎಂಬುವರ ಮನೆ ಮೇಲೆ ಸ್ಥಳೀಯ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಶಾಸಕ ಕಮರುದ್ದೀನ್ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪ ಕೇಳಿ ಬಂದಿತ್ತು. ಚಿನ್ನದ ಮೇಲಿನ ಹೂಡಿಕೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಭಾರಿ ವಂಚನೆಯಾಗಿದ್ದು, ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಇಬ್ಬರು ನಡೆಸುತ್ತಿದ್ದ ಚಿನ್ನದ ಮೇಲಿನ ಹೂಡಿಕೆ ವ್ಯವಹಾರದಲ್ಲಿ ಸುಮಾರು 100 ಕೋಟಿ ರುಗೂ ಅಧಿಕ ವಂಚನೆಯಾಗಿದೆ ಎಂದು ಗ್ರಾಹಕರ ದೂರುಗಳನ್ನು ಆಧಾರಿಸಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಫ್ಯಾಷನ್ ಗೋಲ್ಡ್ ಇಂಟರ್ ನ್ಯಾಷನಲ್ ಎಂಬ ಹೆಸರಿನ ಚಿನ್ನಾಭರಣ ವ್ಯವಹಾರ ನಡೆಸುತ್ತಿದ್ದರು. ಕಮರುದ್ದೀನ್ ಚೇರ್ಮನ್ ಆಗಿದ್ದರೆ, ಪೂಕೊಯಾ ತಂಗಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ ಎಂದು ಎಸ್ ಎಚ್ ಒ ಪಿ ನಾರಾಯಣನ್ ಹೇಳಿದ್ದಾರೆ.
ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಕಾಸರಗೋಡು, ಚಂಡೆರಾ ಸೇರಿದಂತೆ ವಿವಿಧ ಠಾಣೆಗಳಲ್ಲಿ 12ಕ್ಕೂ ಅಧಿಕ ದೂರುಗಳನ್ನು ಕ್ರೈಂ ಬ್ರ್ಯಾಂಚ್ ಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಕಮರುದ್ದೀನ್, ಇದು ರಾಜಕೀಯ ಷಡ್ಯಂತ್ರ, ಗ್ರಾಹಕರಿಗೆ ಹಣ ಹಿಂತಿರುಗಿಸಲು ನಾವು ಬದ್ಧವಾಗಿದ್ದೇವೆ ಎಂದಿದ್ದಾರೆ. ಕರ್ನಾಟಕಕ್ಕೆ ತಾಗಿಕೊಂಡಿರುವ ಕ್ಷೇತ್ರವೂ ಆಗಿರುವ ಮಂಜೇಶ್ವರದಲ್ಲಿ ಶಾಸಕರಾಗಿದ್ದ ಪಿ. ಬಿ ಅಬ್ದುಲ್ ರಝಾಕ್ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಸೋಲಿಸಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಕಮರುದ್ದೀನ್ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿ ಶಾಸಕ ಪ್ರಮಾಣವಚನ ಸ್ವೀಕರಿಸಿ ಸುದ್ದಿಯಾಗಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm