ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.






ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am