ಬ್ರೇಕಿಂಗ್ ನ್ಯೂಸ್
14-09-21 03:46 pm Mangaluru Correspondent ಕರಾವಳಿ
ಬಂಟ್ವಾಳ, ಸೆ.14: ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಬೈಕ್ ಡಿಕ್ಕಿಯಾಗಿದ್ದು, ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಆನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಘಟನೆ ನಡೆದಿರುವುದು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯ ಮೇಲೆ ಬೈಕ್ ಹರಿದಿದ್ದ ವಿಡಿಯೋ ವೈರಲ್ ಆಗಿದೆ. ಇದಕ್ಕೂ ಮುನ್ನವೇ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಸವಾರನ ಅತಿವೇಗದ ಚಾಲನೆಯಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಡಿಕ್ಕಿಯಾಗಿದ್ದಾಗಿ ಕೇಸು ದಾಖಲಾಗಿತ್ತು.



ಈ ಬಗ್ಗೆ ಚೇತನ್ ಎಂಬವರು ಪೊಲೀಸ್ ದೂರು ನೀಡಿದ್ದರು. ತಾನು ಮೋಟರ್ ಸೈಕಲಿನಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ತೆರಳುತ್ತಿದ್ದ ಕೆಎ 70 ಇ- 9186 ಸಂಖ್ಯೆಯ ಬೈಕ್ ವ್ಯಕ್ತಿಗೆ ಡಿಕ್ಕಿಯಾಗಿತ್ತು. ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದಾಗಿ ಘಟನೆ ನಡೆದಿತ್ತು ಎಂದು ದೂರು ನೀಡಿದ್ದರಿಂದ ಪೊಲೀಸರು ಅದೇ ರೀತಿ ಸದ್ರಿ ಬೈಕ್ ಸವಾರನ ವಿರುದ್ಧ ಕೇಸು ದಾಖಲಿಸಿದ್ದರು. ಆದರೆ, ಇಂದು ಘಟನಾ ಸ್ಥಳದ ವಿಡಿಯೋ ಹೊರಬಂದಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ ವ್ಯಕ್ತಿಯ ಚಿತ್ರಣವನನು ತೆರೆದಿಟ್ಟಿದೆ. ಒಬ್ಬಾತ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ನೋಡಿ, ಸರಿದು ವಾಹನ ಚಲಾಯಿಸಿದ್ದರೆ ಹಿಂಬದಿಯಿಂದ ಬಂದಿದ್ದ ಮತ್ತೊಂದು ಬೈಕ್ ಆತನ ಮೇಲಿನಿಂದಲೇ ಹರಿದು ಹೋಗಿತ್ತು.
ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣ ಅತಿ ವೇಗದ ಚಾಲನೆಯೆಂದು ದಾಖಲಾಗಿದ್ದರೂ, ರಸ್ತೆಯಲ್ಲಿ ರಾತ್ರಿ ವೇಳೆ ಮಲಗಿದ್ದು ಒಂದು ಹಂತಕ್ಕೆ ಬೈಕ್ ಸವಾರನನ್ನು ರಕ್ಷಣೆ ಮಾಡಿದೆ.
Video: Click
Mangalore Drunk man dies after bike goes on him after falling asleep on road in Bantwal. The deceased has been identified as Krishnamurthy. Police have booked a case against the Two wheeler rider for over speed.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm