ಬ್ರೇಕಿಂಗ್ ನ್ಯೂಸ್
15-09-21 11:57 am Mangaluru Correspondent ಕರಾವಳಿ
ಮಂಗಳೂರು, ಸೆ.15: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನ ವರದಿ ನೆಗೆಟಿವ್ ಬಂದಿದ್ದು, ಆತಂಕ ದೂರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಯುವಕ ಗೋವಾದಲ್ಲಿ ಆರ್ಟಿ ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ಒಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದು ನಂತರ ಮಂಗಳೂರಿಗೆ ಬಂದು ದಾಖಲಾಗಿದ್ದರು. ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕಿನ ಆತಂಕ ದೂರವಾಗಿದೆ.

ಜ್ವರ, ತಲೆನೋವು ಹಿನ್ನೆಲೆಯಲ್ಲಿ ಸ್ವತಃ ನಿಫಾ ವೈರಸ್ ಸೋಂಕಿನ ಬಗ್ಗೆ ಆತಂಕಗೊಂಡು ಯುವಕ ಪರೀಕ್ಷೆಗೆ ಒಳಗಾಗಿದ್ದ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೂಡ ಯುವಕ ಗಾಬರಿಗೊಂಡಿದ್ದಾನೆ ಅಷ್ಟೇ. ಆತನಿಗೆ ಯಾವುದೇ ರೋಗ ಲಕ್ಷಣ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು.
Read: ಮಂಗಳೂರಿನಲ್ಲಿ ನಿಫಾ ಆತಂಕ ; ಯುವಕನಿಗೆ ಸೋಂಕಿನ ಲಕ್ಷಣಗಳಿಲ್ಲ, ಭಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ; ಜಿಲ್ಲಾಧಿಕಾರಿ
Mangalore Man with Nipah virus fear test reports turn negative. It is said that a Karwar-based microbiologist, who works in Goa, self-reported suspicion of being infected with Nipah virus. His sample was sent to National Institute of Virology, Pune on Monday. Result is awaited. He has been isolated.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am