ಬ್ರೇಕಿಂಗ್ ನ್ಯೂಸ್
08-09-20 09:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಡಿಜಿಪಿ ಪ್ರವೀಣ್ ಸೂದ್ ಇಂದು ಕರಾವಳಿ ಜಿಲ್ಲೆಗಳಿಗೆ ಆಗಮಿಸಿದ್ದರು. ಉಡುಪಿ ಜಿಲ್ಲೆಗೆ ಬಂದ ಬಳಿಕ ಮಂಗಳೂರಿಗೆ ಆಗಮಿಸಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿದ್ರು. ಸಭೆಯಲ್ಲಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಎಸ್ಪಿ ಮತ್ತು ಐಜಿಪಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪ್ರವೀಣ್ ಸೂದ್, ಈಗೆಲ್ಲ ಹಳೆ ಸಂಪ್ರದಾಯದಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡಕ್ಕಾಗಲ್ಲ. ಆಧುನಿಕ ತಂತ್ರಜ್ಞಾನ ಬಳಸ್ಕೊಂಡು ಕೆಲಸ ಮಾಡಬೇಕಾಗತ್ತೆ. ಆರೋಪಿಗಳನ್ನು ಹಿಡಿಯೋದಾಗಲೀ, ಪ್ರಕರಣ ದಾಖಲಿಸೋದಾಗಲೀ ಎಲ್ಲ ವಿಚಾರಗಳೂ ಮೊದಲಿನ ಹಾಗಲ್ಲ ಅಂತ ಹೇಳಿದರು.
ಇನ್ನು ಡ್ರಗ್ ಮಾಫಿಯಾ ಬಗ್ಗೆ ಮುಖ್ಯಮಂತ್ರಿ ಮೊದ್ಲಿಂದಲೂ ಹೇಳ್ತಾನೇ ಇದ್ರು. ಕಟ್ಟುನಿಟ್ಟಿನ ಏಕ್ಷನ್ ಬಗ್ಗೆ ಸೂಚನೆ ಕೊಟ್ಟಂತೆ ನಾವು ಕೆಲಸ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ಈಗ ಒಂದಷ್ಟು ಮಂದಿಯನ್ನು ಎರೆಸ್ಟ್ ಮಾಡಿದ್ದೇವೆ. ರಾಜಧಾನಿ ಆಗಿರೋ ಕಾರಣ ಈ ವಿಚಾರ ಹೆಚ್ಚು ಹೈಲೈಟ್ ಆಗಿದೆ. ಆದರೆ ಪೊಲೀಸ್ ಇಲಾಖೆ ರಾಜ್ಯದ ಎಲ್ಲೆಡೆ ಕಾರ್ಯಾಚರಣೆ ಮಾಡ್ತಾ ಇದೆ. ಬೆಂಗಳೂರು ಅಲ್ಲದೆ, ಕೋಲಾರ, ಚಿತ್ರದುರ್ಗ, ಮಂಗಳೂರಲ್ಲೂ ಹಲವರಿಗೆ ಬಂಧಿಸಿದ್ದೇವೆ ಎಂದರು ಸೂದ್.
ಎನ್ ಡಿಪಿಎಸ್ ಆ್ಯಕ್ಟ್ ತುಂಬ ಕಠಿಣವಾಗಿದ್ದು ಏಕ್ಷನ್ ಮಾಡುತ್ತಿದ್ದೇವೆ. ಪೊಲೀಸರಿಗೆ ಕಟ್ಟುನಿಟ್ಟಾಗಿ ಕಾನೂನು ಪಾಲನೆಗೆ ಸೂಚಿಸಿದ್ದೇವೆ. ಈ ಬಗ್ಗೆ ಬಹಳಷ್ಟು ಕಡೆ ಅಧಿಕಾರಿಗಳಿಗೆ ತರಬೇತಿ ಕೂಡ ಮಾಡ್ತಾ ಇದೇವೆ. ಹಾಗಂತ, ಡ್ರಗ್ ಕಂಟ್ರೋಲ್ ಕೇವಲ ಎನ್ ಸಿಬಿ ಪೊಲೀಸರ ಕೆಲಸ ಮಾತ್ರ ಅಲ್ಲ. ನಾರ್ಕೋಟಿಕ್ ಆ್ಯಕ್ಟ್ ಬಗ್ಗೆ ಎಲ್ಲರದ್ದೂ ಜವಾಬ್ದಾರಿ ಇದೆ. ಪ್ರತಿ ಠಾಣೆಯಲ್ಲೂ ಇದರ ಜಾಗೃತಿ ಇರಬೇಕು.
ಲಾಕ್ಡೌನ್ ಬಳಿಕ ಕ್ರೈಂ ಕಮ್ಮಿಯಾಗಿದೆ, ಈ ಸಮಯದಲ್ಲಿ ಡ್ರಗ್ಸ್ ಹೆಚ್ಚಾಗಿದೆ ಅನ್ನಕ್ಕಾಗಲ್ಲ ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದ ಪ್ರವೀಣ್ ಸೂದ್, ಗಾಂಜಾಕ್ಕಿಂತಲೂ ಸಿಂಥೆಟಿಕ್ ಡ್ರಗ್ ಹಿಡಿಯೋಕೆ ತುಂಬ ಕಷ್ಟ. ಅದರ ಪರಿಮಿತಿ ತುಂಬ ಸಣ್ಣದು ಎಂದ್ರು.
ಇನ್ನು ಬೆಂಗಳೂರಿನಲ್ಲಿ ಬಂಧಿರಾಗಿರೋರು ಹೈಪ್ರೊಫೈಲ್ ಅನ್ನುವುದು ಮೀಡಿಯಾ ಮಂದಿಗೆ ಮಾತ್ರ, ನಮ್ಗೆ ಎಲ್ರೂ ಒಂದೇ. ಕಾನೂನು ಎಲ್ರಿಗೂ ಒಂದೇ. ಹಾಗಾಗಿ ಅವ್ರು ಡ್ರಗ್ ಪೆಡ್ಲರ್ ಅಷ್ಟೇ, ಕಾನೂನು ಹೇಗಿದೆಯೋ ಅದ್ರ ಹಾಗೆ ಕ್ರಮ ಕೈಗೊಳ್ತೀವಿ ಎಂದ್ರು.
ಇನ್ನು ಡ್ರಗ್ ಸೇವನೆ ವಿಚಾರದಲ್ಲಿ ನಮ್ ಸಮಾಜ, ಶಿಕ್ಷಣ ಸಂಸ್ಥೆಗಳು, ಮೀಡಿಯಾ ಎಲ್ಲ ಸೇರಿ ಕೆಲ್ಸ ಮಾಡ್ಬೇಕು. ಡ್ರಗ್ ಕಡಿವಾಣ ಹಾಕೋದು ಕೇವಲ ಪೊಲೀಸರಿಂದ ಸಾಧ್ಯವಿಲ್ಲ ಎಂದು ಸಲಹೆ ಮಾಡಿದ ಡಿಜಿಪಿಯವರು, ಬೆಂಗಳೂರು ಪ್ರಕರಣದ ಬಗ್ಗೆ ತನಿಖೆ ಆಗ್ತಿದ್ದು ಆ ಬಗ್ಗೆ ಈಗ ಏನೂ ಹೇಳೋಕೆ ಆಗಲ್ಲ. ಡ್ರಗ್ಸ್ ಕೇವಲ ಗೋವಾ, ಆಂಧ್ರದಿಂದ ಬರ್ತಿದೆ ಅನ್ನೋದು ತಪ್ಪು ಕಲ್ಪನೆ. ವಿದೇಶಗಳಿಂದ ವಿಮಾನದಲ್ಲೂ ಬರ್ತಾ ಇದೆ. ಹೀಗಾಗಿ ಪೊಲೀಸರು ಎಲ್ಲ ಕೋನಗಳಿಂದಲು ತನಿಖೆ ನಡೆಸ್ತಿದಾರೆ ಎಂದು ಸೂಚ್ಯವಾಗಿ ಹೇಳಿದ್ರು.
Join our WhatsApp group for latest news updates
ಇದನ್ನೂ ಓದಿ: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್ : ಡಿಜಿಪಿ ಪ್ರವೀಣ್ ಸೂದ್
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm