ಬ್ರೇಕಿಂಗ್ ನ್ಯೂಸ್
15-09-21 06:02 pm Mangaluru Correspondent ಕರಾವಳಿ
ಉಳ್ಳಾಲ, ಸೆ.15: ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗುತ್ತಿಗೆ ಕಾರ್ಮಿಕನೊಬ್ಬ 33,000 ವೋಲ್ಟ್ ವಿದ್ಯುತ್ ಹರಿಯುವ ಕಂಬಕ್ಕೇರಿ ಭಾಗಶಃ ಸುಟ್ಟು ಹೋದ ಘಟನೆ ತೊಕ್ಕೊಟ್ಟಿನ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲೂಕು ಮಣಿಕಟ್ಟೆ ನಿವಾಸಿ ಬೊಮ್ಮಪ್ಪ(26) ವಿದ್ಯುತ್ ಅವಘಡಕ್ಕೆ ಭಾಗಶಃ ಸುಟ್ಟು ಆಸ್ಪತ್ರೆ ಸೇರಿದ ದುರ್ದೈವಿ. ಬೊಮ್ಮಪ್ಪ ಅವರು ಪ್ರವೀಣ್ ಸುವರ್ಣ ಎಂಬ ಮೆಸ್ಕಾಂ ಗುತ್ತಿಗೆದಾರರ ಜೊತೆ ಕಳೆದ ಐದು ತಿಂಗಳುಗಳಿಂದ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಇತರ ಕಾರ್ಮಿಕರ ಜೊತೆ ಬೊಮ್ಮಪ್ಪ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.







ಈ ವೇಳೆ ಕಚೇರಿಯ ಅಂಗಣದಲ್ಲಿರುವ 33,000 ವೋಲ್ಟ್ ಯಾರ್ಡ್ ನಲ್ಲಿರುವ ಕಂಬಕ್ಕೆ ಏರಿ ಜಂಪರ್ ಟೈಟ್ ಮಾಡುವಂತೆ ಮೆಸ್ಕಾಂ ನ ಎಇಇ ದಯಾನಂದ್ ಎಂಬವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಹೈ ವೋಲ್ಟ್ ವಿದ್ಯುತ್ ಹರಿಯುತ್ತಿದ್ದರೂ ಲೈನ್ ಆಫ್ ಆಗಿದೆ ಎಂದು ಹೇಳಿ ಕಂಬಕ್ಕೇರಿದ್ದು ಕೆಲವೇ ಕ್ಷಣಗಳಲ್ಲಿ ಇತರ ಕಾರ್ಮಿಕರ ಎದುರೇ ಸುಟ್ಟು ಹೋಗಿದ್ದರು.
ಕೂಡಲೇ ಮೆಸ್ಕಾಂ ಸಿಬ್ಬಂದಿ ಬೊಮ್ಮಪ್ಪನನ್ನ ಕೆಳಗಿಳಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯುತ್ ಆಘಾತಕ್ಕೆ ಬೊಮ್ಮಪ್ಪ ಅವರ ಸೊಂಟಕ್ಕಿಂತ ಕೆಳಗಿನ ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಸ್ಕಾಂ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
Mangalore Thokottu MESCOM Contractor staff Electrocuted after touching 33 thousand vats current illegally. The person is said to be critically and has been admitted to the local hospital.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm