ಬ್ರೇಕಿಂಗ್ ನ್ಯೂಸ್
16-09-21 10:53 am Mangaluru Correspondent ಕರಾವಳಿ
ಮಂಗಳೂರು, ಸೆ.15: ಅಪಘಾತದಲ್ಲಿ ತೀವ್ರ ಗಾಯಗೊಂಡು ನಗರದ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 23 ವರ್ಷದ ಯುವತಿಯ ಅಂಗಾಂಗಗಳನ್ನು ಕುಂಟುಬಸ್ಥರು ಅಗತ್ಯ ಇದ್ದವರಿಗೆ ನೆರವಾಗಲೆಂದು ದಾನ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಹಲ್ಲೂರು ನಿವಾಸಿ ಕವನಾ ಮರಳಸಿದ್ದಯ್ಯ ಹಿರೇಮಠ್ (23) ಎಂಬ ಯುವತಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.12ರಂದು ಎಜೆ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯ ಬ್ರೈನ್ ಡೆಡ್ ಆಗಿತ್ತು. ದೇಹಕ್ಕೆ ಆಗಿರುವ ಗಾಯಗಳು ಗುಣಮುಖ ಆಗದೇ ಇರುವುದು ಮತ್ತು ಬ್ರೇನ್ ಡೆಡ್ ಆಗಿದ್ದರಿಂದ ಕೋಮಾ ಸ್ಥಿತಿಗೆ ಹೋಗಿದ್ದರು. ಬದುಕುವುದು ಸಾಧ್ಯವಿಲ್ಲ ಎಂಬುದನ್ನು ವೈದ್ಯರು ತಿಳಿಸಿದಾಗ, ಕವನಾ ಸೋದರಿಯರು ಆಕೆಯ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಜೀವನ ಸಾರ್ಥಕತೆ ಎನ್ನುವ ಯೋಜನೆಯ ಬಗ್ಗೆ ತಿಳಿದು ತಮ್ಮ ಅಂಗಾಂಗ ಯಾರಿಗಾದರೂ ಅಗತ್ಯ ಇದ್ದವರಿಗೆ ನೆರವಾಗಲೆಂದು ಸೋದರಿಯರು ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಕವನಾ ಕುಟುಂಬಸ್ಥರ ಕೋರಿಕೆಯಂತೆ, ಜೀವನ ಸಾರ್ಥಕತೆ ಯೋಜನೆಯಡಿ ಅಮೂಲ್ಯ ಅಂಗಗಳನ್ನು ಎಜೆ ಆಸ್ಪತ್ರೆಯವರು ಸಂಗ್ರಹಿಸಿದ್ದು, ಅವನ್ನು ಅವಶ್ಯವುಳ್ಳ ವಿವಿಧ ಆಸ್ಪತ್ರೆಗಳಿಗೆ ತಲುಪಿಸಿದ್ದಾರೆ.
ಇದರಂತೆ, ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲೇ ಅಗತ್ಯ ಇದ್ದವರಿಗೆ ಟ್ರಾನ್ಸ್ ಪ್ಲಾಂಟ್ ಮಾಡಲಾಗಿದೆ. ಲಿವರ್ ಅನ್ನು ಸಿಎಂಐ ಬೆಂಗಳೂರು ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್, ಇನ್ನೊಂದು ಕಿಡ್ನಿ, ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಎಜೆ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗಳಿಗೆ ಮಂಗಳೂರು ಏರ್ಪೋರ್ಟ್ ಮೂಲಕ ಮತ್ತು ಮಣಿಪಾಲ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಅಂಗಗಳನ್ನು ತಲುಪಿಸಲಾಗಿದೆ.
Kavana Maralsiddaya Hiremath from Hallur of Haveri district met with accident at Soratur village of Honnali taluk, Shivamogga was shifted to Mangaluru for treatment and was further referred to A J Hospital & Research Centre on September 12.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm