ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.



ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm