ಬ್ರೇಕಿಂಗ್ ನ್ಯೂಸ್
17-09-21 05:06 pm Mangaluru Correspondent ಕರಾವಳಿ
ಮಂಗಳೂರು, ಸೆ.17 : ಪೊಲೀಸರು ಹೆತ್ತವರಿಗೆ, ಗುರು ಹಿರಿಯರಿಗೆ ಮಾತ್ರ ಸೆಲ್ಯೂಟ್ ಮಾಡಬೇಕು. ದುಷ್ಟರು, ವಿದ್ರೋಹಿಗಳ ಪಾಲಿಗೆ ವೀರಭದ್ರರಾಗಬೇಕು. ದುರ್ಗೆಯಂತೆ ಉಗ್ರಾವತಾರ ತಾಳಿ ಶಿಕ್ಷೆ ನೀಡುವಂತಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಆಶಿಸಿದ್ದಾರೆ.
ಮಂಗಳೂರಿನಲ್ಲಿ ಒಂದು ತಿಂಗಳ ಕಾಲ ನಡೆದ ಪೊಲೀಸ್ ಆಕಾಂಕ್ಷಿಗಳ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ಚಲನಚಿತ್ರಗಳಲ್ಲಿ ಪೊಲೀಸರನ್ನು ಹಾಸ್ಯದ ವಸ್ತುವನ್ನಾಗಿ ತೋರಿಸುತ್ತಾರೆ. ಇದರಿಂದ ಸಮಾಜ, ದೇಶಕ್ಕೆ ನಷ್ಟ. ಪೊಲೀಸರನ್ನು ಧೈರ್ಯವಂತರನ್ನಾಗಿ ಮಾಡಿ, ಸತ್ಯ- ನ್ಯಾಯದಲ್ಲಿ ನಡೆಯುವಂತಾಗಿಸಿ ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿದರು. ಪೊಲೀಸ್ ಯೂನಿಫಾರ್ಮ್ಗೆ ಬಹಳ ಮಹತ್ವವಿದ್ದು, ಯುವಕ- ಯುವತಿಯರು ಶಿಷ್ಟರ ರಕ್ಷಣೆಯ, ದುಷ್ಟರ ಶಿಕ್ಷಣೆಯ ಪೊಲೀಸ್ ಕೆಲಸವನ್ನು ಆಯ್ಕೆ ಮಾಡಬೇಕೆಂದು ಕರೆ ನೀಡಿದರು.



ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಕಾರ್ಯವೈಖರಿ ಬಹಳ ವಿಭಿನ್ನವಿದೆ. ಪೊಲೀಸರು ಕರ್ತವ್ಯ ನಿರ್ವಹಿಸಿದ ಪ್ರದೇಶದ ಮಣ್ಣಿನ ಮಗ ಆಗುತ್ತಾರೆ. ಶಶಿಕುಮಾರ್ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಮಣ್ಣಿನ ಮಗನಾಗಿದ್ದಾರೆ. ತುಳು ಭಾಷೆಯನ್ನು ಕಲಿತು ಇನ್ನೂ ಹತ್ತಿರವಾಗಿದ್ದಾರೆ ಎಂದು ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು ಕಮಿಷನರೇಟ್ ವತಿಯಿಂದ 30 ದಿನಗಳ ಪೊಲೀಸ್ ಆಕಾಂಕ್ಷಿಗಳ ತರಬೇತಿ ಶಿಬಿರ ನಡೆದಿದ್ದು ಸಮಾರೋಪ ಸಮಾರಂಭ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 206 ಮಂದಿ ಭಾಗವಹಿಸಿದ್ದು, ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ. ಕರಾವಳಿ ಜಿಲ್ಲೆಯವರು ಪೊಲೀಸ್ ಇಲಾಖೆಗೆ ಬರಬೇಕು ಎಂಬ ಮುತುವರ್ಜಿಯಿಂದ ಕಮಿಷನರ್ ಶಶಿಕುಮಾರ್ ಈ ಶಿಬಿರ ನಡೆಸಿದ್ದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾಣೆ, ಎಎನ್ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧೀಕ್ಷಕ ನಿಖಿಲ್, ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
The valedictory of a month-long training for aspirants to the post of constables and sub-inspectors, was held at St Aloysius Gonzaga hall on Friday September 17. Dharmadhikari of Dharmasthala Dr Veerendra Heggade lighted the lamp to begin the programme.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm