ಬ್ರೇಕಿಂಗ್ ನ್ಯೂಸ್
19-09-21 05:17 pm Mangaluru Correspondent ಕರಾವಳಿ
ಮಂಗಳೂರು, ಸೆ.19: ಹಿಂದುಗಳಿಗೆ ಅನ್ಯಾಯ ಮಾಡಿದ ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ ಎಂದು ಸಿಎಂ ಬೊಮ್ಮಾಯಿ ಉದ್ದೇಶಿಸಿ ಬೆದರಿಕೆ ಒಡ್ಡುವ ರೀತಿ ಹೇಳಿಕೆ ನೀಡಿದ್ದ ಹಿಂದು ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಅವರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.


ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ, ದೇವಸ್ಥಾನ ಒಡೆದ ವಿಚಾರವನ್ನು ಖಂಡಿಸುತ್ತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆನಂತರ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಕೇವಲ ನಾಟಕ ಮಾತ್ರ. ಇವರಿಗೆ ಅಷ್ಟು ಅಭಿಮಾನ ಇದ್ದರೆ ಬಿಜೆಪಿಗೆ ಬೆಂಬಲ ನೀಡಬಾರದು. ದೇವಸ್ಥಾನ ಒಡೆದಿರುವ ವಿಚಾರವನ್ನು ಸಣ್ಣ ತಪ್ಪು ಅನ್ನುತ್ತಿದ್ದಾರೆ. ಇವರಿಗೆ ದೇವಸ್ಥಾನ ಒಡೆದು ಹಾಕಿದ್ದು ಸಣ್ಣ ತಪ್ಪಾದರೆ, ಮತ್ತೆ ಯಾವುದು ದೊಡ್ಡ ತಪ್ಪು. ಬೊಮ್ಮಾಯಿ ಅವರೇ, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ. ನಿಮ್ಮನ್ನು ಹಾಗೇ ಬಿಡುತ್ತೇವೆ ಎಂದುಕೊಂಡಿರಾ ಎಂದು ಪ್ರಶ್ನೆ ಮಾಡಿದ್ದರು.

ಈ ಬಗ್ಗೆ ಹಿಂದು ಮಹಾಸಭಾದ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಎಲ್.ಕೆ.ಸುವರ್ಣ ಎಂಬವರು ಧರ್ಮೇಂದ್ರ ಹೇಳಿಕೆಯನ್ನು ವಿರೋಧಿಸಿ ಮತ್ತು ತಮ್ಮ ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿ ಹೇಳಿಕೆ ನೀಡಿದ್ದಾರೆ ಎಂದು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧರ್ಮೇಂದ್ರ ಬಣದಲ್ಲಿ ರಾಜೇಶ್ ಪವಿತ್ರನ್ ಎಂಬವರು ರಾಜ್ಯಾಧ್ಯಕ್ಷರಾಗಿದ್ದು, ತಾನೇ ಅಧ್ಯಕ್ಷ ಎಂದು ಹೇಳಿಕೊಂಡಿದ್ದಲ್ಲದೆ, ಧರ್ಮೇಂದ್ರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಆನಂತರ ಧರ್ಮೇಂದ್ರ ಜೊತೆಗೆ ರಾಜೇಶ್ ಪವಿತ್ರನ್ ಮತ್ತು ಇನ್ನೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore state president of Hindu Mahasabaha Rajesh Parivartan and Dharmendra arrested by Mangalore Police for threatening remarks against CM during a press meet held regarding demolition of temples in Karnataka
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm