ಬ್ರೇಕಿಂಗ್ ನ್ಯೂಸ್
20-09-21 12:46 pm Mangaluru Correspondent ಕರಾವಳಿ
ಮುಡಿಪು, ಸೆ.20: ರಸ್ತೆ ಬದಿಯ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕನೊಬ್ಬ ಧಿಡೀರ್ ಆಗಿ ರಸ್ತೆ ದಾಟಿ ಓಡುತ್ತಿದ್ದ ವೇಳೆ ಕಾರಿನಡಿಗೆ ಬಿದ್ದರೂ ಪವಾಡ ಸದೃಶ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮುಡಿಪು ಬಳಿಯ ಇರಾದಲ್ಲಿ ನಡೆದಿದೆ.
ಇರಾ ಸೈಟ್ ಬಸ್ ಸ್ಟಾಪ್ ಬಳಿಯ ಮೈಸೂರು ಮೂಲದ ಇಂಜಿನಿಯರ್ ಶಿವಾನಂದ್ ಪುತ್ರ ಮನೋಜ್ (12)ಎಂಬಾತನೇ ಅಪಘಾತದಲ್ಲಿ ಕಾರಿನಡಿಗೆ ಬಿದ್ದು ಅಪಾಯದಿಂದ ಪಾರಾದ ಬಾಲಕ. ಮನೋಜ್ ತನ್ನ ಮನೆ ಅಂಗಳದಿಂದ ದಿಢೀರ್ ಆಗಿ ರಸ್ತೆಗಿಳಿದು ದಾಟಲೆಂದು ಓಡಿದ್ದು ಇನ್ನೊಂದು ಬದಿಯಿಂದ ಬರುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಆದರೆ, ಕಾರು ಚಾಲಕ ದಿಢೀರ್ ಆಗಿ ಬಾಲಕ ಅಡ್ಡ ಬಂದಿದ್ದರಿಂದ ಗಲಿಬಿಲಿಯಾಗಿ ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಅಷ್ಟರಲ್ಲಿ ಕಾರು ಡಿಕ್ಕಿಯಾಗಿ ಬಾಲಕ ಅಡಿಗೆ ಬಿದ್ದಿದ್ದು ರಸ್ತೆ ಬದಿಯ ಪೊದೆಯ ಮೂಲಕ ಆತನ ಮೇಲಿಂದಲೇ ಕಾರು ಹರಿದಿದೆ.
ಅದೃಷ್ಟ ಇದ್ದರೆ ಸಾವನ್ನೂ ಗೆಲ್ಲಬಹುದು ಎನ್ನುವಂತೆ, ಬಾಲಕ ಪೊದೆಯ ಎಡೆಗೆ ಬಿದ್ದ ಕಾರಣ ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ಬಾಲಕ ಮನೋಜ್ ಎಡ ಕಾಲಿಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಸ್ತೆ ಬದಿ ಮನೆಗಳಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ವಹಿಸಬೇಕಿದ್ದು , ಮಕ್ಕಳು ಆಡುವಾಗ, ರಸ್ತೆ ದಾಟುವ ವೇಳೆ ಜಾಗರೂಕರಾಗಿರಬೇಕಿದೆ.
Video:
Mangalore Car hits 12-year- old-boy in Mudipu sustain injury accident recorded in CCTV. The boy who was supposed to be dead has miraculously escape
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm