ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.

ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm