ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.

ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm