ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.

ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am