ಬ್ರೇಕಿಂಗ್ ನ್ಯೂಸ್
25-09-21 05:40 pm Mangaluru Correspondent ಕರಾವಳಿ
ಮಂಗಳೂರು, ಸೆ.25: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು, ಚರಂಡಿಯಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುವ ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮದ ಗಮನಕ್ಕೆ ತಂದಿದ್ದಾರೆ.
ಜೋಕಟ್ಟೆ ಭಾಗದಲ್ಲಿ ರಸ್ತೆ ಬದಿಯ ಚರಂಡಿ, ತೋಡಿನಲ್ಲಿ ಕೊಳಚೆ ನೀರಿನ ಜೊತೆ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದೆ. ಜೋಕಟ್ಟೆ - ತೋಕೂರು ಹಳ್ಳದ ಮೂಲಕ ತೋಡಿನಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದ್ದು, ಅದು ನೇರವಾಗಿ ಬಂದು ಫಲ್ಗುಣಿ ನದಿ ಸೇರುತ್ತಿದೆ. ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡುವುದರಿಂದ ಸ್ಥಳೀಯ ಬಾವಿಗಳಿಗೂ ಪೆಟ್ರೋಲಿಯಂ ಅಂಶ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





ಈ ಬಗ್ಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರಲ್ಲಿ ಕೇಳಿದರೆ, ಪ್ರತಿ ಬಾರಿ ಮಳೆಗಾಲ, ಬೇಸಗೆ ಸಂದರ್ಭದಲ್ಲಿ ಕೆಲವೊಮ್ಮೆ ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡಲಾಗುತ್ತಿತ್ತು. ನಾಲ್ಕು ವರ್ಷಗಳಿಂದ ಈ ರೀತಿ ವಿಷಕಾರಿ ತ್ಯಾಜ್ಯವನ್ನು ಆಗಾಗ ಬಿಡುತ್ತಿದ್ದಾರೆ. ಈ ಬಗ್ಗೆ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ, ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಜನರು ಇವರ ಕರ್ಮವನ್ನು ಅನುಭವಿಸಬೇಕಾಗಿದೆ. ಜನಪ್ರತಿನಿಧಿಗಳು ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೋಕಟ್ಟೆ ಬಳಿಯ ಮೂರನೇ ಹಂತದ ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯವನ್ನು ಹೊರ ಬಿಡಲಾಗಿದೆ. ಎಂಆರ್ ಪಿಎಲ್ ಆವರಣದ ಒಳಗಿನಿಂದಲೇ ಈ ರೀತಿ ಪೆಟ್ರೋಲ್, ಡೀಸೆಲ್ ರೀತಿಯ ತ್ಯಾಜ್ಯ ಚರಂಡಿ ಸೇರುತ್ತಿದೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಇದೇ ಭಾಗದಲ್ಲಿ ಎಂಆರ್ ಪಿಎಲ್ ಘಟಕದಿಂದ ಭಾರೀ ಪ್ರಮಾಣದಲ್ಲಿ ಬೆಂಕಿ ಹೊರಸೂಸುತ್ತಿತ್ತು. ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೂ ಒಳಗಾಗಿದ್ದರು.
Video:
Mangalore Petroleum waste from MRPL enters Palguni river DYFI demands action. Four days huge fire had broke out and residents state that this incident took place becausese of chemical waste getting out.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm