ಬ್ರೇಕಿಂಗ್ ನ್ಯೂಸ್
25-09-21 05:40 pm Mangaluru Correspondent ಕರಾವಳಿ
ಮಂಗಳೂರು, ಸೆ.25: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು, ಚರಂಡಿಯಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುವ ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮದ ಗಮನಕ್ಕೆ ತಂದಿದ್ದಾರೆ.
ಜೋಕಟ್ಟೆ ಭಾಗದಲ್ಲಿ ರಸ್ತೆ ಬದಿಯ ಚರಂಡಿ, ತೋಡಿನಲ್ಲಿ ಕೊಳಚೆ ನೀರಿನ ಜೊತೆ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದೆ. ಜೋಕಟ್ಟೆ - ತೋಕೂರು ಹಳ್ಳದ ಮೂಲಕ ತೋಡಿನಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದ್ದು, ಅದು ನೇರವಾಗಿ ಬಂದು ಫಲ್ಗುಣಿ ನದಿ ಸೇರುತ್ತಿದೆ. ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡುವುದರಿಂದ ಸ್ಥಳೀಯ ಬಾವಿಗಳಿಗೂ ಪೆಟ್ರೋಲಿಯಂ ಅಂಶ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





ಈ ಬಗ್ಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರಲ್ಲಿ ಕೇಳಿದರೆ, ಪ್ರತಿ ಬಾರಿ ಮಳೆಗಾಲ, ಬೇಸಗೆ ಸಂದರ್ಭದಲ್ಲಿ ಕೆಲವೊಮ್ಮೆ ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡಲಾಗುತ್ತಿತ್ತು. ನಾಲ್ಕು ವರ್ಷಗಳಿಂದ ಈ ರೀತಿ ವಿಷಕಾರಿ ತ್ಯಾಜ್ಯವನ್ನು ಆಗಾಗ ಬಿಡುತ್ತಿದ್ದಾರೆ. ಈ ಬಗ್ಗೆ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ, ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಜನರು ಇವರ ಕರ್ಮವನ್ನು ಅನುಭವಿಸಬೇಕಾಗಿದೆ. ಜನಪ್ರತಿನಿಧಿಗಳು ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೋಕಟ್ಟೆ ಬಳಿಯ ಮೂರನೇ ಹಂತದ ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯವನ್ನು ಹೊರ ಬಿಡಲಾಗಿದೆ. ಎಂಆರ್ ಪಿಎಲ್ ಆವರಣದ ಒಳಗಿನಿಂದಲೇ ಈ ರೀತಿ ಪೆಟ್ರೋಲ್, ಡೀಸೆಲ್ ರೀತಿಯ ತ್ಯಾಜ್ಯ ಚರಂಡಿ ಸೇರುತ್ತಿದೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಇದೇ ಭಾಗದಲ್ಲಿ ಎಂಆರ್ ಪಿಎಲ್ ಘಟಕದಿಂದ ಭಾರೀ ಪ್ರಮಾಣದಲ್ಲಿ ಬೆಂಕಿ ಹೊರಸೂಸುತ್ತಿತ್ತು. ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೂ ಒಳಗಾಗಿದ್ದರು.
Video:
Mangalore Petroleum waste from MRPL enters Palguni river DYFI demands action. Four days huge fire had broke out and residents state that this incident took place becausese of chemical waste getting out.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am