ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm